Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...