Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...