Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...