Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...