Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...