Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...