Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...