Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...