Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...