Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...