Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...