Homeಮುಖಪುಟಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

ಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

- Advertisement -
- Advertisement -

ಮುಂಬೈ ಅಕಾಡೆಮಿ ಆಫ್ ದಿ ಮೂವಿಂಗ್ ಇಮೇಜ್ (ಮಾಮಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. 2019 ರಲ್ಲಿ ಮಾಮಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ನಟಿ, ವೃತ್ತಿಪರ ಬದ್ಧತೆಗಳನ್ನು ಉಲ್ಲೇಖಿಸಿ ಈ ಸ್ಥಾನದಿಂದ ಹೊರ ಬರುತ್ತಿರುವುದಾಗಿ ತಿಳಿಸಿದ್ದಾರೆ.

ಮಾಮಿ ಮಂಡಳಿಯಲ್ಲಿರುವುದು ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ಬಹಳ ಉತ್ತಮ ಅನುಭವವಾಗಿದೆ. ಒಬ್ಬ ಕಲಾವಿದೆಯಾಗಿ, ಪ್ರಪಂಚದಾದ್ಯಂತದ ಸಿನೆಮಾ ಮತ್ತು ಪ್ರತಿಭೆಗಳನ್ನು ನನ್ನ ಎರಡನೇ ಮನೆಯಾದ ಮುಂಬೈಗೆ ಕರೆತರುವುದು ಉತ್ತೇಜನಕಾರಿ ವಿಷಯವಾಗಿತ್ತು. ಮಾಮಿಯೊಂದಿಗಿನ ಬಾಂಧವ್ಯವು ಜೀವಿತಾವಧಿಯಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ನನ್ನ ಪ್ರಸ್ತುತ ಕೆಲಸದ ಒತ್ತಡದಿಂದ, ಮಾಮಿಗೆ ಅಗತ್ಯವಿರುವ ಗಮನ ನೀಡಲು ನನಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ನಾನು ಈ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

 ನಮ್ಮ ಒಂಟಿತನವನ್ನು ಕಡಿಮೆ ಮಾಡುವ ಶಕ್ತಿ ಸಿನೆಮಾಕ್ಕೆ ಇದೆ ಎಂದು ನಟಿ ದೀಪಿಕಾ ಹೇಳಿದ್ದಾರೆ. 2019 ರಲ್ಲಿ ಮಾಮಿ ಚಲನಚಿತ್ರೋತ್ಸವದ ಅಧ್ಯಕ್ಷೆಯಾಗಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರು.

ದೀಪಿಕಾ ಪ್ರಸ್ತುತ ಹೆಚ್ಚು ಪ್ರಾಜೆಕ್ಟ್‌ಗಳಲ್ಲಿ ಸಕ್ರಿಯರಾಗಿದ್ದಾರೆ.‌ ಶಕುನ್ ಬಾತ್ರಾ ಅವರ ಹೆಸರಿಡದ ಚಿತ್ರದಲ್ಲಿ, ಶಾರುಖ್ ಖಾನ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೃತಿಕ್ ರೋಷನ್, ಬಾಹುಬಲಿ ನಟ ಪ್ರಭಾಸ್  ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

ಇದಲ್ಲದೆ ದೀಪಿಕಾ ಪಡುಕೋಣೆ ’ದಿ ಇಂಟರ್ನ್’ ಚಿತ್ರದ ಬಾಲಿವುಡ್ ರಿಮೇಕ್ ಸಹ ಹೊಂದಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್ ಎದುರು ಮತ್ತೊಮ್ಮೆ ನಟಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಪಿಕು ಚಿತ್ರದಲ್ಲಿ ಕೆಲಸ ಮಾಡಿದ್ದರು. ಈ ಎಲ್ಲಾ ಕಾರಣಗಳಿಂದ ತಾನು ಮಾಮಿಗೆ ಸಮಯ ನೀಡಲಾಗುತ್ತಿಲ್ಲ ಎಂದು ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...