Homeಮುಖಪುಟಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

ಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

- Advertisement -
- Advertisement -

ಮುಂಬೈ ಅಕಾಡೆಮಿ ಆಫ್ ದಿ ಮೂವಿಂಗ್ ಇಮೇಜ್ (ಮಾಮಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. 2019 ರಲ್ಲಿ ಮಾಮಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ನಟಿ, ವೃತ್ತಿಪರ ಬದ್ಧತೆಗಳನ್ನು ಉಲ್ಲೇಖಿಸಿ ಈ ಸ್ಥಾನದಿಂದ ಹೊರ ಬರುತ್ತಿರುವುದಾಗಿ ತಿಳಿಸಿದ್ದಾರೆ.

ಮಾಮಿ ಮಂಡಳಿಯಲ್ಲಿರುವುದು ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ಬಹಳ ಉತ್ತಮ ಅನುಭವವಾಗಿದೆ. ಒಬ್ಬ ಕಲಾವಿದೆಯಾಗಿ, ಪ್ರಪಂಚದಾದ್ಯಂತದ ಸಿನೆಮಾ ಮತ್ತು ಪ್ರತಿಭೆಗಳನ್ನು ನನ್ನ ಎರಡನೇ ಮನೆಯಾದ ಮುಂಬೈಗೆ ಕರೆತರುವುದು ಉತ್ತೇಜನಕಾರಿ ವಿಷಯವಾಗಿತ್ತು. ಮಾಮಿಯೊಂದಿಗಿನ ಬಾಂಧವ್ಯವು ಜೀವಿತಾವಧಿಯಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ನನ್ನ ಪ್ರಸ್ತುತ ಕೆಲಸದ ಒತ್ತಡದಿಂದ, ಮಾಮಿಗೆ ಅಗತ್ಯವಿರುವ ಗಮನ ನೀಡಲು ನನಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ನಾನು ಈ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

 ನಮ್ಮ ಒಂಟಿತನವನ್ನು ಕಡಿಮೆ ಮಾಡುವ ಶಕ್ತಿ ಸಿನೆಮಾಕ್ಕೆ ಇದೆ ಎಂದು ನಟಿ ದೀಪಿಕಾ ಹೇಳಿದ್ದಾರೆ. 2019 ರಲ್ಲಿ ಮಾಮಿ ಚಲನಚಿತ್ರೋತ್ಸವದ ಅಧ್ಯಕ್ಷೆಯಾಗಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರು.

ದೀಪಿಕಾ ಪ್ರಸ್ತುತ ಹೆಚ್ಚು ಪ್ರಾಜೆಕ್ಟ್‌ಗಳಲ್ಲಿ ಸಕ್ರಿಯರಾಗಿದ್ದಾರೆ.‌ ಶಕುನ್ ಬಾತ್ರಾ ಅವರ ಹೆಸರಿಡದ ಚಿತ್ರದಲ್ಲಿ, ಶಾರುಖ್ ಖಾನ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೃತಿಕ್ ರೋಷನ್, ಬಾಹುಬಲಿ ನಟ ಪ್ರಭಾಸ್  ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

ಇದಲ್ಲದೆ ದೀಪಿಕಾ ಪಡುಕೋಣೆ ’ದಿ ಇಂಟರ್ನ್’ ಚಿತ್ರದ ಬಾಲಿವುಡ್ ರಿಮೇಕ್ ಸಹ ಹೊಂದಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್ ಎದುರು ಮತ್ತೊಮ್ಮೆ ನಟಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಪಿಕು ಚಿತ್ರದಲ್ಲಿ ಕೆಲಸ ಮಾಡಿದ್ದರು. ಈ ಎಲ್ಲಾ ಕಾರಣಗಳಿಂದ ತಾನು ಮಾಮಿಗೆ ಸಮಯ ನೀಡಲಾಗುತ್ತಿಲ್ಲ ಎಂದು ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...