Homeಮುಖಪುಟಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

ಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

- Advertisement -
- Advertisement -

ಮುಂಬೈ ಅಕಾಡೆಮಿ ಆಫ್ ದಿ ಮೂವಿಂಗ್ ಇಮೇಜ್ (ಮಾಮಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. 2019 ರಲ್ಲಿ ಮಾಮಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ನಟಿ, ವೃತ್ತಿಪರ ಬದ್ಧತೆಗಳನ್ನು ಉಲ್ಲೇಖಿಸಿ ಈ ಸ್ಥಾನದಿಂದ ಹೊರ ಬರುತ್ತಿರುವುದಾಗಿ ತಿಳಿಸಿದ್ದಾರೆ.

ಮಾಮಿ ಮಂಡಳಿಯಲ್ಲಿರುವುದು ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ಬಹಳ ಉತ್ತಮ ಅನುಭವವಾಗಿದೆ. ಒಬ್ಬ ಕಲಾವಿದೆಯಾಗಿ, ಪ್ರಪಂಚದಾದ್ಯಂತದ ಸಿನೆಮಾ ಮತ್ತು ಪ್ರತಿಭೆಗಳನ್ನು ನನ್ನ ಎರಡನೇ ಮನೆಯಾದ ಮುಂಬೈಗೆ ಕರೆತರುವುದು ಉತ್ತೇಜನಕಾರಿ ವಿಷಯವಾಗಿತ್ತು. ಮಾಮಿಯೊಂದಿಗಿನ ಬಾಂಧವ್ಯವು ಜೀವಿತಾವಧಿಯಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ನನ್ನ ಪ್ರಸ್ತುತ ಕೆಲಸದ ಒತ್ತಡದಿಂದ, ಮಾಮಿಗೆ ಅಗತ್ಯವಿರುವ ಗಮನ ನೀಡಲು ನನಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ನಾನು ಈ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

 ನಮ್ಮ ಒಂಟಿತನವನ್ನು ಕಡಿಮೆ ಮಾಡುವ ಶಕ್ತಿ ಸಿನೆಮಾಕ್ಕೆ ಇದೆ ಎಂದು ನಟಿ ದೀಪಿಕಾ ಹೇಳಿದ್ದಾರೆ. 2019 ರಲ್ಲಿ ಮಾಮಿ ಚಲನಚಿತ್ರೋತ್ಸವದ ಅಧ್ಯಕ್ಷೆಯಾಗಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರು.

ದೀಪಿಕಾ ಪ್ರಸ್ತುತ ಹೆಚ್ಚು ಪ್ರಾಜೆಕ್ಟ್‌ಗಳಲ್ಲಿ ಸಕ್ರಿಯರಾಗಿದ್ದಾರೆ.‌ ಶಕುನ್ ಬಾತ್ರಾ ಅವರ ಹೆಸರಿಡದ ಚಿತ್ರದಲ್ಲಿ, ಶಾರುಖ್ ಖಾನ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೃತಿಕ್ ರೋಷನ್, ಬಾಹುಬಲಿ ನಟ ಪ್ರಭಾಸ್  ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

ಇದಲ್ಲದೆ ದೀಪಿಕಾ ಪಡುಕೋಣೆ ’ದಿ ಇಂಟರ್ನ್’ ಚಿತ್ರದ ಬಾಲಿವುಡ್ ರಿಮೇಕ್ ಸಹ ಹೊಂದಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್ ಎದುರು ಮತ್ತೊಮ್ಮೆ ನಟಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಪಿಕು ಚಿತ್ರದಲ್ಲಿ ಕೆಲಸ ಮಾಡಿದ್ದರು. ಈ ಎಲ್ಲಾ ಕಾರಣಗಳಿಂದ ತಾನು ಮಾಮಿಗೆ ಸಮಯ ನೀಡಲಾಗುತ್ತಿಲ್ಲ ಎಂದು ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...