Homeಮುಖಪುಟಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

ಮಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಟಿ ದೀಪಿಕಾ ಪಡುಕೋಣೆ

- Advertisement -
- Advertisement -

ಮುಂಬೈ ಅಕಾಡೆಮಿ ಆಫ್ ದಿ ಮೂವಿಂಗ್ ಇಮೇಜ್ (ಮಾಮಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. 2019 ರಲ್ಲಿ ಮಾಮಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ನಟಿ, ವೃತ್ತಿಪರ ಬದ್ಧತೆಗಳನ್ನು ಉಲ್ಲೇಖಿಸಿ ಈ ಸ್ಥಾನದಿಂದ ಹೊರ ಬರುತ್ತಿರುವುದಾಗಿ ತಿಳಿಸಿದ್ದಾರೆ.

ಮಾಮಿ ಮಂಡಳಿಯಲ್ಲಿರುವುದು ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ಬಹಳ ಉತ್ತಮ ಅನುಭವವಾಗಿದೆ. ಒಬ್ಬ ಕಲಾವಿದೆಯಾಗಿ, ಪ್ರಪಂಚದಾದ್ಯಂತದ ಸಿನೆಮಾ ಮತ್ತು ಪ್ರತಿಭೆಗಳನ್ನು ನನ್ನ ಎರಡನೇ ಮನೆಯಾದ ಮುಂಬೈಗೆ ಕರೆತರುವುದು ಉತ್ತೇಜನಕಾರಿ ವಿಷಯವಾಗಿತ್ತು. ಮಾಮಿಯೊಂದಿಗಿನ ಬಾಂಧವ್ಯವು ಜೀವಿತಾವಧಿಯಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ನನ್ನ ಪ್ರಸ್ತುತ ಕೆಲಸದ ಒತ್ತಡದಿಂದ, ಮಾಮಿಗೆ ಅಗತ್ಯವಿರುವ ಗಮನ ನೀಡಲು ನನಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ನಾನು ಈ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

 ನಮ್ಮ ಒಂಟಿತನವನ್ನು ಕಡಿಮೆ ಮಾಡುವ ಶಕ್ತಿ ಸಿನೆಮಾಕ್ಕೆ ಇದೆ ಎಂದು ನಟಿ ದೀಪಿಕಾ ಹೇಳಿದ್ದಾರೆ. 2019 ರಲ್ಲಿ ಮಾಮಿ ಚಲನಚಿತ್ರೋತ್ಸವದ ಅಧ್ಯಕ್ಷೆಯಾಗಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರು.

ದೀಪಿಕಾ ಪ್ರಸ್ತುತ ಹೆಚ್ಚು ಪ್ರಾಜೆಕ್ಟ್‌ಗಳಲ್ಲಿ ಸಕ್ರಿಯರಾಗಿದ್ದಾರೆ.‌ ಶಕುನ್ ಬಾತ್ರಾ ಅವರ ಹೆಸರಿಡದ ಚಿತ್ರದಲ್ಲಿ, ಶಾರುಖ್ ಖಾನ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೃತಿಕ್ ರೋಷನ್, ಬಾಹುಬಲಿ ನಟ ಪ್ರಭಾಸ್  ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

ಇದಲ್ಲದೆ ದೀಪಿಕಾ ಪಡುಕೋಣೆ ’ದಿ ಇಂಟರ್ನ್’ ಚಿತ್ರದ ಬಾಲಿವುಡ್ ರಿಮೇಕ್ ಸಹ ಹೊಂದಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್ ಎದುರು ಮತ್ತೊಮ್ಮೆ ನಟಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಪಿಕು ಚಿತ್ರದಲ್ಲಿ ಕೆಲಸ ಮಾಡಿದ್ದರು. ಈ ಎಲ್ಲಾ ಕಾರಣಗಳಿಂದ ತಾನು ಮಾಮಿಗೆ ಸಮಯ ನೀಡಲಾಗುತ್ತಿಲ್ಲ ಎಂದು ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...