Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...