Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...