Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...