Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...