Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...