Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....