Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...