Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...