Homeಚಳವಳಿ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್...

’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

- Advertisement -
- Advertisement -

ಖ್ಯಾತ ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಹೆಜ್ಜೆ ಹಾಕಿ ಹಲ್ಲೆಗೊಳಗಾದ ಜೆಎನ್‌ಯುಎಸ್‌ಯು ಅಧ್ಯಕ್ಷೆ ಆಯಿಶೆ ಘೋಷ್‌ ಪರ ದೃಢವಾಗಿ ನಿಂತರು. ಆ ಮೂಲಕ ಬಹಳಷ್ಟು ಜನ ಅವರ ದಿಟ್ಟತವನ್ನು ಮೆಚ್ಚಿಕೊಂಡರು.

ಆದರೆ ಅದನ್ನು ಸಹಿಸದ ಹಲವಾರು ಬಲಪಂಥೀಯರು ಅವರನ್ನು ಟ್ರೋಲ್‌ ಮಾಡಿದ್ದಲ್ಲದೇ ಅವರ ಚಪಾಕ್‌ ಸಿನಿಮಾವನ್ನು ವಿಕ್ಷಸಬೇಡಿ ಎಂದು ಕರೆನೀಡಿದರು. ಆ ಚಿತ್ರದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರು. ಚಿತ್ರದಲ್ಲಿ ಆರೋಪಿಯ ಹೆಸರನ್ನು ಮುಸ್ಲಿಂ ಬದಲಿಗೆ ಹಿಂದೂವನ್ನಾಗಿ ತಿರುಚಿದ್ದಾರೆ ಎಂದು ಸುಳ್ಳು ಹರಡಿದರು. ಚಪಾಕ್‌ ಚಿತ್ರದ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡಿದರು. ಇಷ್ಟೆಲ್ಲದರ ಹೊರತಾಗಿಯೂ ಟ್ರೋಲ್‌ ಮಾಡಿದವರಿಗೆ ಕಹಿ ಸುದ್ದಿಯೆಂದರೆ ಚಪಾಕ್‌ ಸಿನಿಮಾ ಲಾಭ ಗಳಿಸಿದ್ದು ಅದೇ ದಾರಿಯಲ್ಲಿ ಮುಂದುವರೆದಿದೆ.

ಮೇಘನಾ ಗುಲ್ಜಾರ್ ನಿದೇರ್ಶನ ಮಾಡಿರುವ ಈ ಚಿತ್ರಕ್ಕೆ ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ದೀಪಿಕಾ ಪಡುಕೋಣೆ, ಗೋವಂದ್ ಸಿಂಗ್ ಸಂಧು ಮತ್ತು ಮೇಘನಾ ಗುಲ್ಜಾರ್ ಹಣ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ವಿಕ್ರಂತ್ ಮಾಸ್ಸಿ ನಟಿಸಿರುವ ಚಪಾಕ್‌ ಚಿತ್ರವು ಮಾಧ್ಯಮಗಳು ಹೇಳುವಂತೆ ನಷ್ಟ ಅನುಭವಿಸಿಲ್ಲ ಬದಲಿಗೆ ಲಾಭದ ಹಾದಿಯಲ್ಲಿದೆ. ಹೇಗೆ ಇಲ್ಲಿದೆ ನೋಡಿ ಡಿಟೈಲ್ಸ್…

ಚಪಾಕ್ ಮಧ್ಯಮ ಬಜೆಟ್ ಚಿತ್ರವಾಗಿದ್ದು, ಮುದ್ರಣಗಳ ವೆಚ್ಚ ಮತ್ತು ಪ್ರಚಾರ ಸೇರಿದಂತೆ ಒಟ್ಟು 35 ಕೋಟಿ ರೂಗಳಲ್ಲಿ ತಯಾರಾಗಿದೆ. ಜನವರಿ 10ರಂದು ಬಿಡುಗಡೆಯಾದ ಸಿನಿಮಾ ಸೋಮವಾರದವರೆಗೆ (11 ದಿನಗಳಲ್ಲಿ) ಭಾರತದಲ್ಲಿ ಕೇವಲ ಟಿಕೆಟ್ ಮಾರಾಟದಿಂದಲೇ 32.48 ಕೋಟಿ ರೂ ಗಳಿಸಿದೆ. ಇನ್ನು ಈ ಚಿತ್ರವು ತನ್ನ ಸಂಗೀತ ಹಕ್ಕುಗಳನ್ನು 3 ಕೋಟಿ ರೂ.ಗೆ ಮತ್ತು ಅದರ ಡಿಜಿಟಲ್ + ಸ್ಯಾಟಲೈಟ್‌ ರೈಟ್ಸ್‌ ಅನ್ನು 23 ಕೋಟಿ ರೂ.ಗೆ ಮಾರಾಟ ಮಾಡಿದೆ. ಹಾಗಾಗಿ, ಚಿತ್ರ ಈಗಾಗಲೇ 58.48 ಕೋಟಿ ರೂ. ಗಳಿಸಿದಂತಾಗಿದೆ.

ಅಷ್ಟೆ ಅಲ್ಲದೇ, ವಿದೇಶದಲ್ಲಿ ಟಿಕೆಟ್ ಮಾರಾಟದಿಂದ ಚಪಾಕ್ 13 ಕೋಟಿ ರೂಗಳನ್ನು ಗಳಿಸಿದ್ದು ಅದನ್ನು ಸೇರಿಸಿದರೆ ಚಿತ್ರದ ಒಟ್ಟು ಗಳಿಕೆ 70 ಕೋಟಿ  ದಾಟುತ್ತದೆ. ಅಂದರೆ ನಿರ್ಮಾಣಕ್ಕೆ ಹಾಕಿದ ಎರಡು ಪಟ್ಟು ದುಡ್ಡನ್ನು ಕೇವಲ 11ದಿನಗಳಲ್ಲಿ ಗಳಿಸಿದ್ದು ಇನ್ನು ನೂರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಮತ್ತಷ್ಟು ಲಾಭ ಗಳಿಸುವ ನಿರೀಕ್ಷೆಯಿದೆ. ಆದರೆ ಕೇವಲ ಹಣಗಳಿಕೆಯ ಸಿನಿಮಾದ ಯಶಸ್ಸನ್ನು ಸಾರುವುದಿಲ್ಲ ಅಲ್ಲವೇ? ಚಪಾಕ್‌ ಬಗ್ಗೆ ಲಕ್ಷಾಂತರು ಜನರು ಮೆಚ್ಚುಗೆಯ ಮಾತುಗಳನ್ನಾಡಿ ದೀಪಿಕಾಳ ಪ್ರಯತ್ನಕ್ಕೆ ಶಹಬ್ಬಾಶ್‌ ಹೇಳಿದ್ದಾರೆ.

ಇದು ದೀಪಿಕಾ ಅವರ ಹಿಂದಿನ ಚಿತ್ರ ಪದ್ಮಾವತ್ ರೀತಿಯ ಭಾರೀ ಹಣವನ್ನು ಗಳಿಸಿಲ್ಲ. ಆದರೆ ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಜೊತೆಯಾಗಿ ನಟಿಸಿದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಪದ್ಮಾವತ್‌ ಚಿತ್ರವನ್ನು ಬರೋಬ್ಬರಿ 200 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು ಎಂಬುದನ್ನು ನಾವು ಮರೆಯಬಾರದು. ಆ ಚಿತ್ರ ಭಾರತವೊಂದರಲ್ಲಿಯೇ 3500 ಪರದೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

ಟ್ವಿಟ್ಟರ್‌ನಲ್ಲಿ ಬಾಯ್ಕಟ್‌ ಹೇಳಿ ಕೂಡಲೇ ಜನ ಅದನ್ನು ತಿರಸ್ಕರಿಸುತ್ತಾರೆ ಎಂಬುದು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಹಿಂದೆ ಇದೇ ರೀತಿ ಬಾಯ್ಕಟ್‌ಗೆ ಗುರಿಯಾಗಿದ್ದ ಪದ್ಮಾವತ್ (₹ 580 ಕೋಟಿ),  ಪಿಕೆ (₹ 850 ಕೋಟಿ), ದಂಗಲ್ (Cr 2000 ಕೋಟಿ), ವೀರ್‌ ದಿ ವೆಡ್ಡಿಂಗ್ (₹ 140 ಕೋಟಿ) ಚಿತ್ರಗಳು ಭಾರೀ ಲಾಭ ಮಾಡಿದ್ದವು ಎಂಬುದನ್ನು ನಾವು ಮರೆಯಬಾರದು.

ಅಲ್ಲದೆ, ಕೇಳಬೇಕಾದ ಪ್ರಶ್ನೆಯೆಂದರೆ, ಚಪಾಕ್‌ ವಿಷಯದಲ್ಲಿ ಏಕೆ ಟ್ರೋಲ್‌‌ ಮಾಡಲಾಯಿತು? ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದು ದೀಪಿಕಾರವರ ವಯಕ್ತಿಕ ಹಕ್ಕು. ಅದು ಬಿಟ್ಟು ಚಿತ್ರದ ಬಗ್ಗೆ ಆಲೋಚಿಸಿದರೆ ಅದು ಮಹಿಳೆಯರ ಮೇಲೆ ಆಸಿಡ್ ದಾಳಿಯನ್ನು ಎತ್ತಿ ತೋರಿಸುವ ಸಾಮಾಜಿಕ ವಿಷಯದ ಕುರಿತ ಚಲನಚಿತ್ರವಾಗಿದೆ. ಆಸಿಡ್‌ ದಾಳಿಯಂತಹ ಭೀಕರ ಅಪರಾಧ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರವಾಗಿದೆ. ಆಸಿಡ್‌ ಮಾರಾಟದ ನಿಷೇಧವನ್ನು ಅಥವಾ ಸುಲಭವಾಗಿ ಲಭ್ಯವಾಗಬಾರದೆಂದು ಪ್ರತಿಪಾದಿಸುವ ಚಿತ್ರವನ್ನು ವಿರೋಧಿಸುವ ಮೂಲಕ ನೀವು ಯಾರ ಪರ ನಿಲ್ಲುತ್ತಿದ್ದೀರಿ? ಟ್ರೋಲ್‌ ಮಾಡಿದವರು ದಯವಿಟ್ಟು ಆಲೋಚಿಸಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...