Homeಚಳವಳಿ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್...

’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

- Advertisement -
- Advertisement -

ಖ್ಯಾತ ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಹೆಜ್ಜೆ ಹಾಕಿ ಹಲ್ಲೆಗೊಳಗಾದ ಜೆಎನ್‌ಯುಎಸ್‌ಯು ಅಧ್ಯಕ್ಷೆ ಆಯಿಶೆ ಘೋಷ್‌ ಪರ ದೃಢವಾಗಿ ನಿಂತರು. ಆ ಮೂಲಕ ಬಹಳಷ್ಟು ಜನ ಅವರ ದಿಟ್ಟತವನ್ನು ಮೆಚ್ಚಿಕೊಂಡರು.

ಆದರೆ ಅದನ್ನು ಸಹಿಸದ ಹಲವಾರು ಬಲಪಂಥೀಯರು ಅವರನ್ನು ಟ್ರೋಲ್‌ ಮಾಡಿದ್ದಲ್ಲದೇ ಅವರ ಚಪಾಕ್‌ ಸಿನಿಮಾವನ್ನು ವಿಕ್ಷಸಬೇಡಿ ಎಂದು ಕರೆನೀಡಿದರು. ಆ ಚಿತ್ರದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರು. ಚಿತ್ರದಲ್ಲಿ ಆರೋಪಿಯ ಹೆಸರನ್ನು ಮುಸ್ಲಿಂ ಬದಲಿಗೆ ಹಿಂದೂವನ್ನಾಗಿ ತಿರುಚಿದ್ದಾರೆ ಎಂದು ಸುಳ್ಳು ಹರಡಿದರು. ಚಪಾಕ್‌ ಚಿತ್ರದ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡಿದರು. ಇಷ್ಟೆಲ್ಲದರ ಹೊರತಾಗಿಯೂ ಟ್ರೋಲ್‌ ಮಾಡಿದವರಿಗೆ ಕಹಿ ಸುದ್ದಿಯೆಂದರೆ ಚಪಾಕ್‌ ಸಿನಿಮಾ ಲಾಭ ಗಳಿಸಿದ್ದು ಅದೇ ದಾರಿಯಲ್ಲಿ ಮುಂದುವರೆದಿದೆ.

ಮೇಘನಾ ಗುಲ್ಜಾರ್ ನಿದೇರ್ಶನ ಮಾಡಿರುವ ಈ ಚಿತ್ರಕ್ಕೆ ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ದೀಪಿಕಾ ಪಡುಕೋಣೆ, ಗೋವಂದ್ ಸಿಂಗ್ ಸಂಧು ಮತ್ತು ಮೇಘನಾ ಗುಲ್ಜಾರ್ ಹಣ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ವಿಕ್ರಂತ್ ಮಾಸ್ಸಿ ನಟಿಸಿರುವ ಚಪಾಕ್‌ ಚಿತ್ರವು ಮಾಧ್ಯಮಗಳು ಹೇಳುವಂತೆ ನಷ್ಟ ಅನುಭವಿಸಿಲ್ಲ ಬದಲಿಗೆ ಲಾಭದ ಹಾದಿಯಲ್ಲಿದೆ. ಹೇಗೆ ಇಲ್ಲಿದೆ ನೋಡಿ ಡಿಟೈಲ್ಸ್…

ಚಪಾಕ್ ಮಧ್ಯಮ ಬಜೆಟ್ ಚಿತ್ರವಾಗಿದ್ದು, ಮುದ್ರಣಗಳ ವೆಚ್ಚ ಮತ್ತು ಪ್ರಚಾರ ಸೇರಿದಂತೆ ಒಟ್ಟು 35 ಕೋಟಿ ರೂಗಳಲ್ಲಿ ತಯಾರಾಗಿದೆ. ಜನವರಿ 10ರಂದು ಬಿಡುಗಡೆಯಾದ ಸಿನಿಮಾ ಸೋಮವಾರದವರೆಗೆ (11 ದಿನಗಳಲ್ಲಿ) ಭಾರತದಲ್ಲಿ ಕೇವಲ ಟಿಕೆಟ್ ಮಾರಾಟದಿಂದಲೇ 32.48 ಕೋಟಿ ರೂ ಗಳಿಸಿದೆ. ಇನ್ನು ಈ ಚಿತ್ರವು ತನ್ನ ಸಂಗೀತ ಹಕ್ಕುಗಳನ್ನು 3 ಕೋಟಿ ರೂ.ಗೆ ಮತ್ತು ಅದರ ಡಿಜಿಟಲ್ + ಸ್ಯಾಟಲೈಟ್‌ ರೈಟ್ಸ್‌ ಅನ್ನು 23 ಕೋಟಿ ರೂ.ಗೆ ಮಾರಾಟ ಮಾಡಿದೆ. ಹಾಗಾಗಿ, ಚಿತ್ರ ಈಗಾಗಲೇ 58.48 ಕೋಟಿ ರೂ. ಗಳಿಸಿದಂತಾಗಿದೆ.

ಅಷ್ಟೆ ಅಲ್ಲದೇ, ವಿದೇಶದಲ್ಲಿ ಟಿಕೆಟ್ ಮಾರಾಟದಿಂದ ಚಪಾಕ್ 13 ಕೋಟಿ ರೂಗಳನ್ನು ಗಳಿಸಿದ್ದು ಅದನ್ನು ಸೇರಿಸಿದರೆ ಚಿತ್ರದ ಒಟ್ಟು ಗಳಿಕೆ 70 ಕೋಟಿ  ದಾಟುತ್ತದೆ. ಅಂದರೆ ನಿರ್ಮಾಣಕ್ಕೆ ಹಾಕಿದ ಎರಡು ಪಟ್ಟು ದುಡ್ಡನ್ನು ಕೇವಲ 11ದಿನಗಳಲ್ಲಿ ಗಳಿಸಿದ್ದು ಇನ್ನು ನೂರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಮತ್ತಷ್ಟು ಲಾಭ ಗಳಿಸುವ ನಿರೀಕ್ಷೆಯಿದೆ. ಆದರೆ ಕೇವಲ ಹಣಗಳಿಕೆಯ ಸಿನಿಮಾದ ಯಶಸ್ಸನ್ನು ಸಾರುವುದಿಲ್ಲ ಅಲ್ಲವೇ? ಚಪಾಕ್‌ ಬಗ್ಗೆ ಲಕ್ಷಾಂತರು ಜನರು ಮೆಚ್ಚುಗೆಯ ಮಾತುಗಳನ್ನಾಡಿ ದೀಪಿಕಾಳ ಪ್ರಯತ್ನಕ್ಕೆ ಶಹಬ್ಬಾಶ್‌ ಹೇಳಿದ್ದಾರೆ.

ಇದು ದೀಪಿಕಾ ಅವರ ಹಿಂದಿನ ಚಿತ್ರ ಪದ್ಮಾವತ್ ರೀತಿಯ ಭಾರೀ ಹಣವನ್ನು ಗಳಿಸಿಲ್ಲ. ಆದರೆ ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಜೊತೆಯಾಗಿ ನಟಿಸಿದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಪದ್ಮಾವತ್‌ ಚಿತ್ರವನ್ನು ಬರೋಬ್ಬರಿ 200 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು ಎಂಬುದನ್ನು ನಾವು ಮರೆಯಬಾರದು. ಆ ಚಿತ್ರ ಭಾರತವೊಂದರಲ್ಲಿಯೇ 3500 ಪರದೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

ಟ್ವಿಟ್ಟರ್‌ನಲ್ಲಿ ಬಾಯ್ಕಟ್‌ ಹೇಳಿ ಕೂಡಲೇ ಜನ ಅದನ್ನು ತಿರಸ್ಕರಿಸುತ್ತಾರೆ ಎಂಬುದು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಹಿಂದೆ ಇದೇ ರೀತಿ ಬಾಯ್ಕಟ್‌ಗೆ ಗುರಿಯಾಗಿದ್ದ ಪದ್ಮಾವತ್ (₹ 580 ಕೋಟಿ),  ಪಿಕೆ (₹ 850 ಕೋಟಿ), ದಂಗಲ್ (Cr 2000 ಕೋಟಿ), ವೀರ್‌ ದಿ ವೆಡ್ಡಿಂಗ್ (₹ 140 ಕೋಟಿ) ಚಿತ್ರಗಳು ಭಾರೀ ಲಾಭ ಮಾಡಿದ್ದವು ಎಂಬುದನ್ನು ನಾವು ಮರೆಯಬಾರದು.

ಅಲ್ಲದೆ, ಕೇಳಬೇಕಾದ ಪ್ರಶ್ನೆಯೆಂದರೆ, ಚಪಾಕ್‌ ವಿಷಯದಲ್ಲಿ ಏಕೆ ಟ್ರೋಲ್‌‌ ಮಾಡಲಾಯಿತು? ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದು ದೀಪಿಕಾರವರ ವಯಕ್ತಿಕ ಹಕ್ಕು. ಅದು ಬಿಟ್ಟು ಚಿತ್ರದ ಬಗ್ಗೆ ಆಲೋಚಿಸಿದರೆ ಅದು ಮಹಿಳೆಯರ ಮೇಲೆ ಆಸಿಡ್ ದಾಳಿಯನ್ನು ಎತ್ತಿ ತೋರಿಸುವ ಸಾಮಾಜಿಕ ವಿಷಯದ ಕುರಿತ ಚಲನಚಿತ್ರವಾಗಿದೆ. ಆಸಿಡ್‌ ದಾಳಿಯಂತಹ ಭೀಕರ ಅಪರಾಧ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರವಾಗಿದೆ. ಆಸಿಡ್‌ ಮಾರಾಟದ ನಿಷೇಧವನ್ನು ಅಥವಾ ಸುಲಭವಾಗಿ ಲಭ್ಯವಾಗಬಾರದೆಂದು ಪ್ರತಿಪಾದಿಸುವ ಚಿತ್ರವನ್ನು ವಿರೋಧಿಸುವ ಮೂಲಕ ನೀವು ಯಾರ ಪರ ನಿಲ್ಲುತ್ತಿದ್ದೀರಿ? ಟ್ರೋಲ್‌ ಮಾಡಿದವರು ದಯವಿಟ್ಟು ಆಲೋಚಿಸಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...