Homeಚಳವಳಿ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್...

’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

- Advertisement -
- Advertisement -

ಖ್ಯಾತ ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಹೆಜ್ಜೆ ಹಾಕಿ ಹಲ್ಲೆಗೊಳಗಾದ ಜೆಎನ್‌ಯುಎಸ್‌ಯು ಅಧ್ಯಕ್ಷೆ ಆಯಿಶೆ ಘೋಷ್‌ ಪರ ದೃಢವಾಗಿ ನಿಂತರು. ಆ ಮೂಲಕ ಬಹಳಷ್ಟು ಜನ ಅವರ ದಿಟ್ಟತವನ್ನು ಮೆಚ್ಚಿಕೊಂಡರು.

ಆದರೆ ಅದನ್ನು ಸಹಿಸದ ಹಲವಾರು ಬಲಪಂಥೀಯರು ಅವರನ್ನು ಟ್ರೋಲ್‌ ಮಾಡಿದ್ದಲ್ಲದೇ ಅವರ ಚಪಾಕ್‌ ಸಿನಿಮಾವನ್ನು ವಿಕ್ಷಸಬೇಡಿ ಎಂದು ಕರೆನೀಡಿದರು. ಆ ಚಿತ್ರದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರು. ಚಿತ್ರದಲ್ಲಿ ಆರೋಪಿಯ ಹೆಸರನ್ನು ಮುಸ್ಲಿಂ ಬದಲಿಗೆ ಹಿಂದೂವನ್ನಾಗಿ ತಿರುಚಿದ್ದಾರೆ ಎಂದು ಸುಳ್ಳು ಹರಡಿದರು. ಚಪಾಕ್‌ ಚಿತ್ರದ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡಿದರು. ಇಷ್ಟೆಲ್ಲದರ ಹೊರತಾಗಿಯೂ ಟ್ರೋಲ್‌ ಮಾಡಿದವರಿಗೆ ಕಹಿ ಸುದ್ದಿಯೆಂದರೆ ಚಪಾಕ್‌ ಸಿನಿಮಾ ಲಾಭ ಗಳಿಸಿದ್ದು ಅದೇ ದಾರಿಯಲ್ಲಿ ಮುಂದುವರೆದಿದೆ.

ಮೇಘನಾ ಗುಲ್ಜಾರ್ ನಿದೇರ್ಶನ ಮಾಡಿರುವ ಈ ಚಿತ್ರಕ್ಕೆ ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ದೀಪಿಕಾ ಪಡುಕೋಣೆ, ಗೋವಂದ್ ಸಿಂಗ್ ಸಂಧು ಮತ್ತು ಮೇಘನಾ ಗುಲ್ಜಾರ್ ಹಣ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ವಿಕ್ರಂತ್ ಮಾಸ್ಸಿ ನಟಿಸಿರುವ ಚಪಾಕ್‌ ಚಿತ್ರವು ಮಾಧ್ಯಮಗಳು ಹೇಳುವಂತೆ ನಷ್ಟ ಅನುಭವಿಸಿಲ್ಲ ಬದಲಿಗೆ ಲಾಭದ ಹಾದಿಯಲ್ಲಿದೆ. ಹೇಗೆ ಇಲ್ಲಿದೆ ನೋಡಿ ಡಿಟೈಲ್ಸ್…

ಚಪಾಕ್ ಮಧ್ಯಮ ಬಜೆಟ್ ಚಿತ್ರವಾಗಿದ್ದು, ಮುದ್ರಣಗಳ ವೆಚ್ಚ ಮತ್ತು ಪ್ರಚಾರ ಸೇರಿದಂತೆ ಒಟ್ಟು 35 ಕೋಟಿ ರೂಗಳಲ್ಲಿ ತಯಾರಾಗಿದೆ. ಜನವರಿ 10ರಂದು ಬಿಡುಗಡೆಯಾದ ಸಿನಿಮಾ ಸೋಮವಾರದವರೆಗೆ (11 ದಿನಗಳಲ್ಲಿ) ಭಾರತದಲ್ಲಿ ಕೇವಲ ಟಿಕೆಟ್ ಮಾರಾಟದಿಂದಲೇ 32.48 ಕೋಟಿ ರೂ ಗಳಿಸಿದೆ. ಇನ್ನು ಈ ಚಿತ್ರವು ತನ್ನ ಸಂಗೀತ ಹಕ್ಕುಗಳನ್ನು 3 ಕೋಟಿ ರೂ.ಗೆ ಮತ್ತು ಅದರ ಡಿಜಿಟಲ್ + ಸ್ಯಾಟಲೈಟ್‌ ರೈಟ್ಸ್‌ ಅನ್ನು 23 ಕೋಟಿ ರೂ.ಗೆ ಮಾರಾಟ ಮಾಡಿದೆ. ಹಾಗಾಗಿ, ಚಿತ್ರ ಈಗಾಗಲೇ 58.48 ಕೋಟಿ ರೂ. ಗಳಿಸಿದಂತಾಗಿದೆ.

ಅಷ್ಟೆ ಅಲ್ಲದೇ, ವಿದೇಶದಲ್ಲಿ ಟಿಕೆಟ್ ಮಾರಾಟದಿಂದ ಚಪಾಕ್ 13 ಕೋಟಿ ರೂಗಳನ್ನು ಗಳಿಸಿದ್ದು ಅದನ್ನು ಸೇರಿಸಿದರೆ ಚಿತ್ರದ ಒಟ್ಟು ಗಳಿಕೆ 70 ಕೋಟಿ  ದಾಟುತ್ತದೆ. ಅಂದರೆ ನಿರ್ಮಾಣಕ್ಕೆ ಹಾಕಿದ ಎರಡು ಪಟ್ಟು ದುಡ್ಡನ್ನು ಕೇವಲ 11ದಿನಗಳಲ್ಲಿ ಗಳಿಸಿದ್ದು ಇನ್ನು ನೂರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಮತ್ತಷ್ಟು ಲಾಭ ಗಳಿಸುವ ನಿರೀಕ್ಷೆಯಿದೆ. ಆದರೆ ಕೇವಲ ಹಣಗಳಿಕೆಯ ಸಿನಿಮಾದ ಯಶಸ್ಸನ್ನು ಸಾರುವುದಿಲ್ಲ ಅಲ್ಲವೇ? ಚಪಾಕ್‌ ಬಗ್ಗೆ ಲಕ್ಷಾಂತರು ಜನರು ಮೆಚ್ಚುಗೆಯ ಮಾತುಗಳನ್ನಾಡಿ ದೀಪಿಕಾಳ ಪ್ರಯತ್ನಕ್ಕೆ ಶಹಬ್ಬಾಶ್‌ ಹೇಳಿದ್ದಾರೆ.

ಇದು ದೀಪಿಕಾ ಅವರ ಹಿಂದಿನ ಚಿತ್ರ ಪದ್ಮಾವತ್ ರೀತಿಯ ಭಾರೀ ಹಣವನ್ನು ಗಳಿಸಿಲ್ಲ. ಆದರೆ ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಜೊತೆಯಾಗಿ ನಟಿಸಿದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಪದ್ಮಾವತ್‌ ಚಿತ್ರವನ್ನು ಬರೋಬ್ಬರಿ 200 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು ಎಂಬುದನ್ನು ನಾವು ಮರೆಯಬಾರದು. ಆ ಚಿತ್ರ ಭಾರತವೊಂದರಲ್ಲಿಯೇ 3500 ಪರದೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

ಟ್ವಿಟ್ಟರ್‌ನಲ್ಲಿ ಬಾಯ್ಕಟ್‌ ಹೇಳಿ ಕೂಡಲೇ ಜನ ಅದನ್ನು ತಿರಸ್ಕರಿಸುತ್ತಾರೆ ಎಂಬುದು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಹಿಂದೆ ಇದೇ ರೀತಿ ಬಾಯ್ಕಟ್‌ಗೆ ಗುರಿಯಾಗಿದ್ದ ಪದ್ಮಾವತ್ (₹ 580 ಕೋಟಿ),  ಪಿಕೆ (₹ 850 ಕೋಟಿ), ದಂಗಲ್ (Cr 2000 ಕೋಟಿ), ವೀರ್‌ ದಿ ವೆಡ್ಡಿಂಗ್ (₹ 140 ಕೋಟಿ) ಚಿತ್ರಗಳು ಭಾರೀ ಲಾಭ ಮಾಡಿದ್ದವು ಎಂಬುದನ್ನು ನಾವು ಮರೆಯಬಾರದು.

ಅಲ್ಲದೆ, ಕೇಳಬೇಕಾದ ಪ್ರಶ್ನೆಯೆಂದರೆ, ಚಪಾಕ್‌ ವಿಷಯದಲ್ಲಿ ಏಕೆ ಟ್ರೋಲ್‌‌ ಮಾಡಲಾಯಿತು? ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದು ದೀಪಿಕಾರವರ ವಯಕ್ತಿಕ ಹಕ್ಕು. ಅದು ಬಿಟ್ಟು ಚಿತ್ರದ ಬಗ್ಗೆ ಆಲೋಚಿಸಿದರೆ ಅದು ಮಹಿಳೆಯರ ಮೇಲೆ ಆಸಿಡ್ ದಾಳಿಯನ್ನು ಎತ್ತಿ ತೋರಿಸುವ ಸಾಮಾಜಿಕ ವಿಷಯದ ಕುರಿತ ಚಲನಚಿತ್ರವಾಗಿದೆ. ಆಸಿಡ್‌ ದಾಳಿಯಂತಹ ಭೀಕರ ಅಪರಾಧ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರವಾಗಿದೆ. ಆಸಿಡ್‌ ಮಾರಾಟದ ನಿಷೇಧವನ್ನು ಅಥವಾ ಸುಲಭವಾಗಿ ಲಭ್ಯವಾಗಬಾರದೆಂದು ಪ್ರತಿಪಾದಿಸುವ ಚಿತ್ರವನ್ನು ವಿರೋಧಿಸುವ ಮೂಲಕ ನೀವು ಯಾರ ಪರ ನಿಲ್ಲುತ್ತಿದ್ದೀರಿ? ಟ್ರೋಲ್‌ ಮಾಡಿದವರು ದಯವಿಟ್ಟು ಆಲೋಚಿಸಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...