Homeಚಳವಳಿ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್...

’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

- Advertisement -
- Advertisement -

ಖ್ಯಾತ ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಹೆಜ್ಜೆ ಹಾಕಿ ಹಲ್ಲೆಗೊಳಗಾದ ಜೆಎನ್‌ಯುಎಸ್‌ಯು ಅಧ್ಯಕ್ಷೆ ಆಯಿಶೆ ಘೋಷ್‌ ಪರ ದೃಢವಾಗಿ ನಿಂತರು. ಆ ಮೂಲಕ ಬಹಳಷ್ಟು ಜನ ಅವರ ದಿಟ್ಟತವನ್ನು ಮೆಚ್ಚಿಕೊಂಡರು.

ಆದರೆ ಅದನ್ನು ಸಹಿಸದ ಹಲವಾರು ಬಲಪಂಥೀಯರು ಅವರನ್ನು ಟ್ರೋಲ್‌ ಮಾಡಿದ್ದಲ್ಲದೇ ಅವರ ಚಪಾಕ್‌ ಸಿನಿಮಾವನ್ನು ವಿಕ್ಷಸಬೇಡಿ ಎಂದು ಕರೆನೀಡಿದರು. ಆ ಚಿತ್ರದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರು. ಚಿತ್ರದಲ್ಲಿ ಆರೋಪಿಯ ಹೆಸರನ್ನು ಮುಸ್ಲಿಂ ಬದಲಿಗೆ ಹಿಂದೂವನ್ನಾಗಿ ತಿರುಚಿದ್ದಾರೆ ಎಂದು ಸುಳ್ಳು ಹರಡಿದರು. ಚಪಾಕ್‌ ಚಿತ್ರದ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡಿದರು. ಇಷ್ಟೆಲ್ಲದರ ಹೊರತಾಗಿಯೂ ಟ್ರೋಲ್‌ ಮಾಡಿದವರಿಗೆ ಕಹಿ ಸುದ್ದಿಯೆಂದರೆ ಚಪಾಕ್‌ ಸಿನಿಮಾ ಲಾಭ ಗಳಿಸಿದ್ದು ಅದೇ ದಾರಿಯಲ್ಲಿ ಮುಂದುವರೆದಿದೆ.

ಮೇಘನಾ ಗುಲ್ಜಾರ್ ನಿದೇರ್ಶನ ಮಾಡಿರುವ ಈ ಚಿತ್ರಕ್ಕೆ ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ದೀಪಿಕಾ ಪಡುಕೋಣೆ, ಗೋವಂದ್ ಸಿಂಗ್ ಸಂಧು ಮತ್ತು ಮೇಘನಾ ಗುಲ್ಜಾರ್ ಹಣ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ವಿಕ್ರಂತ್ ಮಾಸ್ಸಿ ನಟಿಸಿರುವ ಚಪಾಕ್‌ ಚಿತ್ರವು ಮಾಧ್ಯಮಗಳು ಹೇಳುವಂತೆ ನಷ್ಟ ಅನುಭವಿಸಿಲ್ಲ ಬದಲಿಗೆ ಲಾಭದ ಹಾದಿಯಲ್ಲಿದೆ. ಹೇಗೆ ಇಲ್ಲಿದೆ ನೋಡಿ ಡಿಟೈಲ್ಸ್…

ಚಪಾಕ್ ಮಧ್ಯಮ ಬಜೆಟ್ ಚಿತ್ರವಾಗಿದ್ದು, ಮುದ್ರಣಗಳ ವೆಚ್ಚ ಮತ್ತು ಪ್ರಚಾರ ಸೇರಿದಂತೆ ಒಟ್ಟು 35 ಕೋಟಿ ರೂಗಳಲ್ಲಿ ತಯಾರಾಗಿದೆ. ಜನವರಿ 10ರಂದು ಬಿಡುಗಡೆಯಾದ ಸಿನಿಮಾ ಸೋಮವಾರದವರೆಗೆ (11 ದಿನಗಳಲ್ಲಿ) ಭಾರತದಲ್ಲಿ ಕೇವಲ ಟಿಕೆಟ್ ಮಾರಾಟದಿಂದಲೇ 32.48 ಕೋಟಿ ರೂ ಗಳಿಸಿದೆ. ಇನ್ನು ಈ ಚಿತ್ರವು ತನ್ನ ಸಂಗೀತ ಹಕ್ಕುಗಳನ್ನು 3 ಕೋಟಿ ರೂ.ಗೆ ಮತ್ತು ಅದರ ಡಿಜಿಟಲ್ + ಸ್ಯಾಟಲೈಟ್‌ ರೈಟ್ಸ್‌ ಅನ್ನು 23 ಕೋಟಿ ರೂ.ಗೆ ಮಾರಾಟ ಮಾಡಿದೆ. ಹಾಗಾಗಿ, ಚಿತ್ರ ಈಗಾಗಲೇ 58.48 ಕೋಟಿ ರೂ. ಗಳಿಸಿದಂತಾಗಿದೆ.

ಅಷ್ಟೆ ಅಲ್ಲದೇ, ವಿದೇಶದಲ್ಲಿ ಟಿಕೆಟ್ ಮಾರಾಟದಿಂದ ಚಪಾಕ್ 13 ಕೋಟಿ ರೂಗಳನ್ನು ಗಳಿಸಿದ್ದು ಅದನ್ನು ಸೇರಿಸಿದರೆ ಚಿತ್ರದ ಒಟ್ಟು ಗಳಿಕೆ 70 ಕೋಟಿ  ದಾಟುತ್ತದೆ. ಅಂದರೆ ನಿರ್ಮಾಣಕ್ಕೆ ಹಾಕಿದ ಎರಡು ಪಟ್ಟು ದುಡ್ಡನ್ನು ಕೇವಲ 11ದಿನಗಳಲ್ಲಿ ಗಳಿಸಿದ್ದು ಇನ್ನು ನೂರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಮತ್ತಷ್ಟು ಲಾಭ ಗಳಿಸುವ ನಿರೀಕ್ಷೆಯಿದೆ. ಆದರೆ ಕೇವಲ ಹಣಗಳಿಕೆಯ ಸಿನಿಮಾದ ಯಶಸ್ಸನ್ನು ಸಾರುವುದಿಲ್ಲ ಅಲ್ಲವೇ? ಚಪಾಕ್‌ ಬಗ್ಗೆ ಲಕ್ಷಾಂತರು ಜನರು ಮೆಚ್ಚುಗೆಯ ಮಾತುಗಳನ್ನಾಡಿ ದೀಪಿಕಾಳ ಪ್ರಯತ್ನಕ್ಕೆ ಶಹಬ್ಬಾಶ್‌ ಹೇಳಿದ್ದಾರೆ.

ಇದು ದೀಪಿಕಾ ಅವರ ಹಿಂದಿನ ಚಿತ್ರ ಪದ್ಮಾವತ್ ರೀತಿಯ ಭಾರೀ ಹಣವನ್ನು ಗಳಿಸಿಲ್ಲ. ಆದರೆ ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಜೊತೆಯಾಗಿ ನಟಿಸಿದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಪದ್ಮಾವತ್‌ ಚಿತ್ರವನ್ನು ಬರೋಬ್ಬರಿ 200 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು ಎಂಬುದನ್ನು ನಾವು ಮರೆಯಬಾರದು. ಆ ಚಿತ್ರ ಭಾರತವೊಂದರಲ್ಲಿಯೇ 3500 ಪರದೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

ಟ್ವಿಟ್ಟರ್‌ನಲ್ಲಿ ಬಾಯ್ಕಟ್‌ ಹೇಳಿ ಕೂಡಲೇ ಜನ ಅದನ್ನು ತಿರಸ್ಕರಿಸುತ್ತಾರೆ ಎಂಬುದು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಹಿಂದೆ ಇದೇ ರೀತಿ ಬಾಯ್ಕಟ್‌ಗೆ ಗುರಿಯಾಗಿದ್ದ ಪದ್ಮಾವತ್ (₹ 580 ಕೋಟಿ),  ಪಿಕೆ (₹ 850 ಕೋಟಿ), ದಂಗಲ್ (Cr 2000 ಕೋಟಿ), ವೀರ್‌ ದಿ ವೆಡ್ಡಿಂಗ್ (₹ 140 ಕೋಟಿ) ಚಿತ್ರಗಳು ಭಾರೀ ಲಾಭ ಮಾಡಿದ್ದವು ಎಂಬುದನ್ನು ನಾವು ಮರೆಯಬಾರದು.

ಅಲ್ಲದೆ, ಕೇಳಬೇಕಾದ ಪ್ರಶ್ನೆಯೆಂದರೆ, ಚಪಾಕ್‌ ವಿಷಯದಲ್ಲಿ ಏಕೆ ಟ್ರೋಲ್‌‌ ಮಾಡಲಾಯಿತು? ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದು ದೀಪಿಕಾರವರ ವಯಕ್ತಿಕ ಹಕ್ಕು. ಅದು ಬಿಟ್ಟು ಚಿತ್ರದ ಬಗ್ಗೆ ಆಲೋಚಿಸಿದರೆ ಅದು ಮಹಿಳೆಯರ ಮೇಲೆ ಆಸಿಡ್ ದಾಳಿಯನ್ನು ಎತ್ತಿ ತೋರಿಸುವ ಸಾಮಾಜಿಕ ವಿಷಯದ ಕುರಿತ ಚಲನಚಿತ್ರವಾಗಿದೆ. ಆಸಿಡ್‌ ದಾಳಿಯಂತಹ ಭೀಕರ ಅಪರಾಧ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರವಾಗಿದೆ. ಆಸಿಡ್‌ ಮಾರಾಟದ ನಿಷೇಧವನ್ನು ಅಥವಾ ಸುಲಭವಾಗಿ ಲಭ್ಯವಾಗಬಾರದೆಂದು ಪ್ರತಿಪಾದಿಸುವ ಚಿತ್ರವನ್ನು ವಿರೋಧಿಸುವ ಮೂಲಕ ನೀವು ಯಾರ ಪರ ನಿಲ್ಲುತ್ತಿದ್ದೀರಿ? ಟ್ರೋಲ್‌ ಮಾಡಿದವರು ದಯವಿಟ್ಟು ಆಲೋಚಿಸಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...