Homeಚಳವಳಿ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್...

’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

- Advertisement -
- Advertisement -

ಖ್ಯಾತ ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಹೆಜ್ಜೆ ಹಾಕಿ ಹಲ್ಲೆಗೊಳಗಾದ ಜೆಎನ್‌ಯುಎಸ್‌ಯು ಅಧ್ಯಕ್ಷೆ ಆಯಿಶೆ ಘೋಷ್‌ ಪರ ದೃಢವಾಗಿ ನಿಂತರು. ಆ ಮೂಲಕ ಬಹಳಷ್ಟು ಜನ ಅವರ ದಿಟ್ಟತವನ್ನು ಮೆಚ್ಚಿಕೊಂಡರು.

ಆದರೆ ಅದನ್ನು ಸಹಿಸದ ಹಲವಾರು ಬಲಪಂಥೀಯರು ಅವರನ್ನು ಟ್ರೋಲ್‌ ಮಾಡಿದ್ದಲ್ಲದೇ ಅವರ ಚಪಾಕ್‌ ಸಿನಿಮಾವನ್ನು ವಿಕ್ಷಸಬೇಡಿ ಎಂದು ಕರೆನೀಡಿದರು. ಆ ಚಿತ್ರದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರು. ಚಿತ್ರದಲ್ಲಿ ಆರೋಪಿಯ ಹೆಸರನ್ನು ಮುಸ್ಲಿಂ ಬದಲಿಗೆ ಹಿಂದೂವನ್ನಾಗಿ ತಿರುಚಿದ್ದಾರೆ ಎಂದು ಸುಳ್ಳು ಹರಡಿದರು. ಚಪಾಕ್‌ ಚಿತ್ರದ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡಿದರು. ಇಷ್ಟೆಲ್ಲದರ ಹೊರತಾಗಿಯೂ ಟ್ರೋಲ್‌ ಮಾಡಿದವರಿಗೆ ಕಹಿ ಸುದ್ದಿಯೆಂದರೆ ಚಪಾಕ್‌ ಸಿನಿಮಾ ಲಾಭ ಗಳಿಸಿದ್ದು ಅದೇ ದಾರಿಯಲ್ಲಿ ಮುಂದುವರೆದಿದೆ.

ಮೇಘನಾ ಗುಲ್ಜಾರ್ ನಿದೇರ್ಶನ ಮಾಡಿರುವ ಈ ಚಿತ್ರಕ್ಕೆ ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ದೀಪಿಕಾ ಪಡುಕೋಣೆ, ಗೋವಂದ್ ಸಿಂಗ್ ಸಂಧು ಮತ್ತು ಮೇಘನಾ ಗುಲ್ಜಾರ್ ಹಣ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ವಿಕ್ರಂತ್ ಮಾಸ್ಸಿ ನಟಿಸಿರುವ ಚಪಾಕ್‌ ಚಿತ್ರವು ಮಾಧ್ಯಮಗಳು ಹೇಳುವಂತೆ ನಷ್ಟ ಅನುಭವಿಸಿಲ್ಲ ಬದಲಿಗೆ ಲಾಭದ ಹಾದಿಯಲ್ಲಿದೆ. ಹೇಗೆ ಇಲ್ಲಿದೆ ನೋಡಿ ಡಿಟೈಲ್ಸ್…

ಚಪಾಕ್ ಮಧ್ಯಮ ಬಜೆಟ್ ಚಿತ್ರವಾಗಿದ್ದು, ಮುದ್ರಣಗಳ ವೆಚ್ಚ ಮತ್ತು ಪ್ರಚಾರ ಸೇರಿದಂತೆ ಒಟ್ಟು 35 ಕೋಟಿ ರೂಗಳಲ್ಲಿ ತಯಾರಾಗಿದೆ. ಜನವರಿ 10ರಂದು ಬಿಡುಗಡೆಯಾದ ಸಿನಿಮಾ ಸೋಮವಾರದವರೆಗೆ (11 ದಿನಗಳಲ್ಲಿ) ಭಾರತದಲ್ಲಿ ಕೇವಲ ಟಿಕೆಟ್ ಮಾರಾಟದಿಂದಲೇ 32.48 ಕೋಟಿ ರೂ ಗಳಿಸಿದೆ. ಇನ್ನು ಈ ಚಿತ್ರವು ತನ್ನ ಸಂಗೀತ ಹಕ್ಕುಗಳನ್ನು 3 ಕೋಟಿ ರೂ.ಗೆ ಮತ್ತು ಅದರ ಡಿಜಿಟಲ್ + ಸ್ಯಾಟಲೈಟ್‌ ರೈಟ್ಸ್‌ ಅನ್ನು 23 ಕೋಟಿ ರೂ.ಗೆ ಮಾರಾಟ ಮಾಡಿದೆ. ಹಾಗಾಗಿ, ಚಿತ್ರ ಈಗಾಗಲೇ 58.48 ಕೋಟಿ ರೂ. ಗಳಿಸಿದಂತಾಗಿದೆ.

ಅಷ್ಟೆ ಅಲ್ಲದೇ, ವಿದೇಶದಲ್ಲಿ ಟಿಕೆಟ್ ಮಾರಾಟದಿಂದ ಚಪಾಕ್ 13 ಕೋಟಿ ರೂಗಳನ್ನು ಗಳಿಸಿದ್ದು ಅದನ್ನು ಸೇರಿಸಿದರೆ ಚಿತ್ರದ ಒಟ್ಟು ಗಳಿಕೆ 70 ಕೋಟಿ  ದಾಟುತ್ತದೆ. ಅಂದರೆ ನಿರ್ಮಾಣಕ್ಕೆ ಹಾಕಿದ ಎರಡು ಪಟ್ಟು ದುಡ್ಡನ್ನು ಕೇವಲ 11ದಿನಗಳಲ್ಲಿ ಗಳಿಸಿದ್ದು ಇನ್ನು ನೂರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಮತ್ತಷ್ಟು ಲಾಭ ಗಳಿಸುವ ನಿರೀಕ್ಷೆಯಿದೆ. ಆದರೆ ಕೇವಲ ಹಣಗಳಿಕೆಯ ಸಿನಿಮಾದ ಯಶಸ್ಸನ್ನು ಸಾರುವುದಿಲ್ಲ ಅಲ್ಲವೇ? ಚಪಾಕ್‌ ಬಗ್ಗೆ ಲಕ್ಷಾಂತರು ಜನರು ಮೆಚ್ಚುಗೆಯ ಮಾತುಗಳನ್ನಾಡಿ ದೀಪಿಕಾಳ ಪ್ರಯತ್ನಕ್ಕೆ ಶಹಬ್ಬಾಶ್‌ ಹೇಳಿದ್ದಾರೆ.

ಇದು ದೀಪಿಕಾ ಅವರ ಹಿಂದಿನ ಚಿತ್ರ ಪದ್ಮಾವತ್ ರೀತಿಯ ಭಾರೀ ಹಣವನ್ನು ಗಳಿಸಿಲ್ಲ. ಆದರೆ ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಜೊತೆಯಾಗಿ ನಟಿಸಿದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಪದ್ಮಾವತ್‌ ಚಿತ್ರವನ್ನು ಬರೋಬ್ಬರಿ 200 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು ಎಂಬುದನ್ನು ನಾವು ಮರೆಯಬಾರದು. ಆ ಚಿತ್ರ ಭಾರತವೊಂದರಲ್ಲಿಯೇ 3500 ಪರದೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಚಪಾಕ್‌ ಕಮರ್ಷಿಯಲ್‌ ಚಿತ್ರವಲ್ಲ. ಹಾಗಾಗಿ ಇದನ್ನು ಕೇವಲ 1700 ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೂ ಅದು ಹೂಡಿದ ಬಂಡವಾಳದ ಡಬಲ್‌ ಗಳಿಸಿದೆ.

ಟ್ವಿಟ್ಟರ್‌ನಲ್ಲಿ ಬಾಯ್ಕಟ್‌ ಹೇಳಿ ಕೂಡಲೇ ಜನ ಅದನ್ನು ತಿರಸ್ಕರಿಸುತ್ತಾರೆ ಎಂಬುದು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಹಿಂದೆ ಇದೇ ರೀತಿ ಬಾಯ್ಕಟ್‌ಗೆ ಗುರಿಯಾಗಿದ್ದ ಪದ್ಮಾವತ್ (₹ 580 ಕೋಟಿ),  ಪಿಕೆ (₹ 850 ಕೋಟಿ), ದಂಗಲ್ (Cr 2000 ಕೋಟಿ), ವೀರ್‌ ದಿ ವೆಡ್ಡಿಂಗ್ (₹ 140 ಕೋಟಿ) ಚಿತ್ರಗಳು ಭಾರೀ ಲಾಭ ಮಾಡಿದ್ದವು ಎಂಬುದನ್ನು ನಾವು ಮರೆಯಬಾರದು.

ಅಲ್ಲದೆ, ಕೇಳಬೇಕಾದ ಪ್ರಶ್ನೆಯೆಂದರೆ, ಚಪಾಕ್‌ ವಿಷಯದಲ್ಲಿ ಏಕೆ ಟ್ರೋಲ್‌‌ ಮಾಡಲಾಯಿತು? ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದು ದೀಪಿಕಾರವರ ವಯಕ್ತಿಕ ಹಕ್ಕು. ಅದು ಬಿಟ್ಟು ಚಿತ್ರದ ಬಗ್ಗೆ ಆಲೋಚಿಸಿದರೆ ಅದು ಮಹಿಳೆಯರ ಮೇಲೆ ಆಸಿಡ್ ದಾಳಿಯನ್ನು ಎತ್ತಿ ತೋರಿಸುವ ಸಾಮಾಜಿಕ ವಿಷಯದ ಕುರಿತ ಚಲನಚಿತ್ರವಾಗಿದೆ. ಆಸಿಡ್‌ ದಾಳಿಯಂತಹ ಭೀಕರ ಅಪರಾಧ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರವಾಗಿದೆ. ಆಸಿಡ್‌ ಮಾರಾಟದ ನಿಷೇಧವನ್ನು ಅಥವಾ ಸುಲಭವಾಗಿ ಲಭ್ಯವಾಗಬಾರದೆಂದು ಪ್ರತಿಪಾದಿಸುವ ಚಿತ್ರವನ್ನು ವಿರೋಧಿಸುವ ಮೂಲಕ ನೀವು ಯಾರ ಪರ ನಿಲ್ಲುತ್ತಿದ್ದೀರಿ? ಟ್ರೋಲ್‌ ಮಾಡಿದವರು ದಯವಿಟ್ಟು ಆಲೋಚಿಸಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...