HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...