HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...