HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...