HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...