HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...