HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...