Homeಮುಖಪುಟಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

- Advertisement -
- Advertisement -

ಬಾಲಿವುಡ್ ಚಿತ್ರ ‘ಪಠಾನ್‌’ನ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಬಳಸಲಾಗಿರುವ ವೇಷಭೂಷಣದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೆಲವು ದೃಶ್ಯಗಳನ್ನು ‘ತಿದ್ದುಪಡಿ’ ಮಾಡದಿದ್ದರೆ, ಸಿನಿಮಾ ಪ್ರದರ್ಶನದ ಬಗ್ಗೆ ಸರ್ಕಾರ ಏನು ಮಾಡಬೇಕು ಎಂದು ಯೋಚಿಸುತ್ತದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾದ ಮಿಶ್ರಾ, “ದೀಪಿಕಾ ಪಡುಕೋಣೆ ಅವರು ಜೆಎನ್‌ಯು ಪ್ರಕರಣದಲ್ಲಿ ಕಂಡುಬಂದಂತೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾದ ನಂತರ ಮಿಶ್ರಾ ಅವರ ಹೇಳಿಕೆ ಹೊರಬಿದ್ದಿದೆ. ಹಾಡಿನಲ್ಲಿ ಕಂಡುಬರುವ ವೇಷಭೂಷಣಗಳು ಮೇಲ್ನೋಟಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಅವರು ತಕರಾರು ತೆಗೆದಿದ್ದಾರೆ. ಈ ಹಾಡನ್ನು ಕಲುಷಿತ ಮನಸ್ಥಿತಿಯಿಂದ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ದೃಶ್ಯಗಳನ್ನು ಮತ್ತು ಪಡುಕೋಣೆ ಅವರ ವೇಷಭೂಷಣಗಳನ್ನು (ಹಾಡಿನಲ್ಲಿ) ಸರಿಪಡಿಸಲು ನಾನು ವಿನಂತಿಸುತ್ತೇನೆ. ಇಲ್ಲದಿದ್ದರೆ ಈ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶಿಸಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ” ಎಂದು ಮಿಶ್ರಾ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಮೋವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜೆಎನ್‌ಯು ಪ್ರಕರಣದಲ್ಲಿ ಕಂಡುಬರುವಂತೆ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

2016ರಲ್ಲಿ ಜವಾಹರಲಾಲ್‌ ನೆಹರೂ ಯೂನಿವರ್ಸಿಟಿಯಲ್ಲಿ ನಡೆದ ಪ್ರತಿಭಟನೆಯ ನಂತರ ‘ತುಕ್ಡೆ-ತುಕ್ಡೆ ಗ್ಯಾಂಗ್’ ಪದವನ್ನು ಬಿಜೆಪಿ ಬಳಸಲಾರಂಭಿಸಿದೆ.

ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾದ ಪಠಾನ್ ಅನ್ನು ಜನವರಿ 25, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಮಿಶ್ರಾ ಅಕ್ಟೋಬರ್‌ನಲ್ಲಿ ಇದೇ ರೀತಿಯ ಆಕ್ಷೇಪಗಳ ಮೂಲಕ ಸುದ್ದಿಯಲ್ಲಿದ್ದರು. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ್‌’ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದರು. ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಈ ವರ್ಷದ ಜುಲೈನಲ್ಲಿ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ಯ ವಿವಾದಾತ್ಮಕ ಪೋಸ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಅದರ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲು ಸೂಚಿಸಿದ್ದರು.

ಪ್ರಕಾಶ್ ರಾಜ್ ಆಕ್ಷೇಪ

ಈಗ ಎದ್ದಿರುವ ವಿವಾದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೇಸರಿ ತೊಟ್ಟವರು ಅತ್ಯಾಚಾರಿಗಳಾದಾಗ ಪರವಾಗಿಲ್ಲ, ದ್ವೇಷ ಭಾಷಣ ಮಾಡಿದರೂ ಪರವಾಗಿಲ್ಲ, ದಲ್ಲಾಳಿ ಶಾಸಕರಾದರೂ ಓಕೆ, ಕೇಸರಿ ಧರಿಸಿದ ಸ್ವಾಮೀಜಿ ಅಪ್ರಾಪ್ತರನ್ನು ರೇಪ್‌ ಮಾಡಿದರೂ ಸರಿ- ಆದರೆ ಸಿನಿಮಾದಲ್ಲಿ (ಕೇಸರಿ) ಬಟ್ಟೆ ಧರಿಸುವಂತಿಲ್ಲ” ಎಂದು ಟೀಕಿಸಿದ್ದಾರೆ.

ನರೋತ್ತಮ ಮಿಶ್ರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಅಸಹ್ಯಕರ, ನಾವು ಇವುಗಳನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು. ಬಣ್ಣದ ಕುರುಡು” ಎಂದಿದ್ದಾರೆ. ‘ಅಂಧಭಕ್ತ್‌’ ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...