Homeಮುಖಪುಟಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

- Advertisement -
- Advertisement -

ಬಾಲಿವುಡ್ ಚಿತ್ರ ‘ಪಠಾನ್‌’ನ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಬಳಸಲಾಗಿರುವ ವೇಷಭೂಷಣದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೆಲವು ದೃಶ್ಯಗಳನ್ನು ‘ತಿದ್ದುಪಡಿ’ ಮಾಡದಿದ್ದರೆ, ಸಿನಿಮಾ ಪ್ರದರ್ಶನದ ಬಗ್ಗೆ ಸರ್ಕಾರ ಏನು ಮಾಡಬೇಕು ಎಂದು ಯೋಚಿಸುತ್ತದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾದ ಮಿಶ್ರಾ, “ದೀಪಿಕಾ ಪಡುಕೋಣೆ ಅವರು ಜೆಎನ್‌ಯು ಪ್ರಕರಣದಲ್ಲಿ ಕಂಡುಬಂದಂತೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾದ ನಂತರ ಮಿಶ್ರಾ ಅವರ ಹೇಳಿಕೆ ಹೊರಬಿದ್ದಿದೆ. ಹಾಡಿನಲ್ಲಿ ಕಂಡುಬರುವ ವೇಷಭೂಷಣಗಳು ಮೇಲ್ನೋಟಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಅವರು ತಕರಾರು ತೆಗೆದಿದ್ದಾರೆ. ಈ ಹಾಡನ್ನು ಕಲುಷಿತ ಮನಸ್ಥಿತಿಯಿಂದ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ದೃಶ್ಯಗಳನ್ನು ಮತ್ತು ಪಡುಕೋಣೆ ಅವರ ವೇಷಭೂಷಣಗಳನ್ನು (ಹಾಡಿನಲ್ಲಿ) ಸರಿಪಡಿಸಲು ನಾನು ವಿನಂತಿಸುತ್ತೇನೆ. ಇಲ್ಲದಿದ್ದರೆ ಈ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶಿಸಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ” ಎಂದು ಮಿಶ್ರಾ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಮೋವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜೆಎನ್‌ಯು ಪ್ರಕರಣದಲ್ಲಿ ಕಂಡುಬರುವಂತೆ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

2016ರಲ್ಲಿ ಜವಾಹರಲಾಲ್‌ ನೆಹರೂ ಯೂನಿವರ್ಸಿಟಿಯಲ್ಲಿ ನಡೆದ ಪ್ರತಿಭಟನೆಯ ನಂತರ ‘ತುಕ್ಡೆ-ತುಕ್ಡೆ ಗ್ಯಾಂಗ್’ ಪದವನ್ನು ಬಿಜೆಪಿ ಬಳಸಲಾರಂಭಿಸಿದೆ.

ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾದ ಪಠಾನ್ ಅನ್ನು ಜನವರಿ 25, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಮಿಶ್ರಾ ಅಕ್ಟೋಬರ್‌ನಲ್ಲಿ ಇದೇ ರೀತಿಯ ಆಕ್ಷೇಪಗಳ ಮೂಲಕ ಸುದ್ದಿಯಲ್ಲಿದ್ದರು. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ್‌’ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದರು. ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಈ ವರ್ಷದ ಜುಲೈನಲ್ಲಿ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ಯ ವಿವಾದಾತ್ಮಕ ಪೋಸ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಅದರ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲು ಸೂಚಿಸಿದ್ದರು.

ಪ್ರಕಾಶ್ ರಾಜ್ ಆಕ್ಷೇಪ

ಈಗ ಎದ್ದಿರುವ ವಿವಾದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೇಸರಿ ತೊಟ್ಟವರು ಅತ್ಯಾಚಾರಿಗಳಾದಾಗ ಪರವಾಗಿಲ್ಲ, ದ್ವೇಷ ಭಾಷಣ ಮಾಡಿದರೂ ಪರವಾಗಿಲ್ಲ, ದಲ್ಲಾಳಿ ಶಾಸಕರಾದರೂ ಓಕೆ, ಕೇಸರಿ ಧರಿಸಿದ ಸ್ವಾಮೀಜಿ ಅಪ್ರಾಪ್ತರನ್ನು ರೇಪ್‌ ಮಾಡಿದರೂ ಸರಿ- ಆದರೆ ಸಿನಿಮಾದಲ್ಲಿ (ಕೇಸರಿ) ಬಟ್ಟೆ ಧರಿಸುವಂತಿಲ್ಲ” ಎಂದು ಟೀಕಿಸಿದ್ದಾರೆ.

ನರೋತ್ತಮ ಮಿಶ್ರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಅಸಹ್ಯಕರ, ನಾವು ಇವುಗಳನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು. ಬಣ್ಣದ ಕುರುಡು” ಎಂದಿದ್ದಾರೆ. ‘ಅಂಧಭಕ್ತ್‌’ ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...