Homeಮುಖಪುಟಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಆಗಲಿದೆ.

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ತನ್ನ ಸಾಕ್ಷ್ಯಚಿತ್ರವನ್ನು ಉನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಆಳವಾದ ಸಂಶೋಧನೆಯ ನಂತರವೇ ನಿರ್ಮಿಸಲಾಗಿದೆ ಎಂದು ಬಿಬಿಸಿ ಹೇಳಿಕೆ ಎಂದು ವೆರೈಟಿ ಮ್ಯಾಗಜೀನ್ ವರದಿ ಮಾಡಿದೆ.

ಸಾಕ್ಷ್ಯಚಿತ್ರ ನಿರ್ಮಾಣದ ಸಂದರ್ಭದಲ್ಲಿ ಬಿಬಿಸಿ ವಕ್ತಾರರು ಭಾರತದ ಸರ್ಕಾರವು ತನ್ನ ವಾದವನ್ನು ಮುಂದಿಡಲು ಕೇಳಿಕೊಂಡರು. ಆದರೆ ಅದಕ್ಕೆ ಭಾರತ ಸರ್ಕಾರ ನಿರಾಕರಿಸಿತು ಎಂದು ಬಿಬಿಸಿ ಹೇಳಿಕೊಂಡಿದೆ.

ಸಾಕ್ಷ್ಯಚಿತ್ರವು ಮೋದಿಯವರ ಕುರಿತು ಕಳಂಕಿತ ನಿರೂಪಣೆ ತೇಲಿಬಿಡಲು ವಿನ್ಯಾಸಗೊಳಿಸಲಾದ ಪ್ರೊಪೊಗಂಡ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆರೋಪಿಸಿದೆ. “ಈ ಸಾಕ್ಷ್ಯಚಿತ್ರದಲ್ಲಿ ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ಮುಂದುವರಿದ ವಸಾಹತುಶಾಹಿ ಮನಸ್ಥಿತಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ಅದಕ್ಕಾಗಿ ಇದನ್ನು ಈ ನಿರೂಪಣೆಯನ್ನು ಮತ್ತೆ ಮತ್ತೆ ತೇಲಿಬಿಡಲಾಗುತ್ತಿ” ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಸಿ ತನ್ನ ಸಾಕ್ಷ್ಯಚಿತ್ರವನ್ನು ಸಮರ್ಥಿಸಿಕೊಂಡಿದ್ದು ‘ಈ ಸಾಕ್ಷ್ಯಚಿತ್ರವು ಬಿಜೆಪಿ ಪಕ್ಷದ ಸದಸ್ಯರ ಪ್ರತಿಕ್ರಿಯೆಗಳನ್ನು ಒಳಗೊಂಡಂತೆ ಹಲವಾರು ಅಭಿಪ್ರಾಯಗಳನ್ನು ಒಳಗೊಂಡಿದ್ದು, ಆಳವಾದ ಸಂಶೋಧನೆಯ ನಂತರವೇ ಇದನ್ನು ನಿರ್ಮಿಸಲಾಗಿದೆ ಎಂದಿದೆ.

‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಇದೇ ಮಂಗಳವಾರ ಬಿಬಿಸಿ ಬಿಡುಗಡೆ ಮಾಡಿತ್ತು. ಆದರೆ ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಆ ನಂತರ ಬಿಬಿಸಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ 2002 ರ ಗಲಭೆಗಳ ಸಮಯದಲ್ಲಿ ಹಿಂಸಾಚಾರದ ಪ್ರಮಾಣವು “ವರದಿ ಮಾಡಿದ್ದಕ್ಕಿಂತ ಹೆಚ್ಚು” ಎಂದು ಬ್ರಿಟಿಷ್ ತನಿಖಾ ತಂಡವು ತೀರ್ಮಾನಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ. ಫೆಬ್ರವರಿ 27, 2002 ರಂದು ಅಂದಿನ ಗುಜರಾತ್ ಸಿಎಂ ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಮತ್ತು ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದರು ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ಅದು ಉಲ್ಲೇಖಿಸಿದೆ.

ತನಿಖಾ ತಂಡದ ಭಾಗವಾಗಿದ್ದ ಬ್ರಿಟಿಷ್ ಮಾಜಿ ಹಿರಿಯ ರಾಜತಾಂತ್ರಿಕರು, ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ ಎಂದು ಆರೋಪಿಸಿದ್ದಾರೆ. ಆ ಗಲಭೆಗೆ ನರೇಂದ್ರ ಮೋದಿಯವರೆ ಸಂಪೂರ್ಣ ಹೊಣೆ ಎಂದು ಸಾಕ್ಷ್ಯಚಿತ್ರ ತೋರಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...