Homeಮುಖಪುಟಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಆಗಲಿದೆ.

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ತನ್ನ ಸಾಕ್ಷ್ಯಚಿತ್ರವನ್ನು ಉನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಆಳವಾದ ಸಂಶೋಧನೆಯ ನಂತರವೇ ನಿರ್ಮಿಸಲಾಗಿದೆ ಎಂದು ಬಿಬಿಸಿ ಹೇಳಿಕೆ ಎಂದು ವೆರೈಟಿ ಮ್ಯಾಗಜೀನ್ ವರದಿ ಮಾಡಿದೆ.

ಸಾಕ್ಷ್ಯಚಿತ್ರ ನಿರ್ಮಾಣದ ಸಂದರ್ಭದಲ್ಲಿ ಬಿಬಿಸಿ ವಕ್ತಾರರು ಭಾರತದ ಸರ್ಕಾರವು ತನ್ನ ವಾದವನ್ನು ಮುಂದಿಡಲು ಕೇಳಿಕೊಂಡರು. ಆದರೆ ಅದಕ್ಕೆ ಭಾರತ ಸರ್ಕಾರ ನಿರಾಕರಿಸಿತು ಎಂದು ಬಿಬಿಸಿ ಹೇಳಿಕೊಂಡಿದೆ.

ಸಾಕ್ಷ್ಯಚಿತ್ರವು ಮೋದಿಯವರ ಕುರಿತು ಕಳಂಕಿತ ನಿರೂಪಣೆ ತೇಲಿಬಿಡಲು ವಿನ್ಯಾಸಗೊಳಿಸಲಾದ ಪ್ರೊಪೊಗಂಡ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆರೋಪಿಸಿದೆ. “ಈ ಸಾಕ್ಷ್ಯಚಿತ್ರದಲ್ಲಿ ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ಮುಂದುವರಿದ ವಸಾಹತುಶಾಹಿ ಮನಸ್ಥಿತಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ಅದಕ್ಕಾಗಿ ಇದನ್ನು ಈ ನಿರೂಪಣೆಯನ್ನು ಮತ್ತೆ ಮತ್ತೆ ತೇಲಿಬಿಡಲಾಗುತ್ತಿ” ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಸಿ ತನ್ನ ಸಾಕ್ಷ್ಯಚಿತ್ರವನ್ನು ಸಮರ್ಥಿಸಿಕೊಂಡಿದ್ದು ‘ಈ ಸಾಕ್ಷ್ಯಚಿತ್ರವು ಬಿಜೆಪಿ ಪಕ್ಷದ ಸದಸ್ಯರ ಪ್ರತಿಕ್ರಿಯೆಗಳನ್ನು ಒಳಗೊಂಡಂತೆ ಹಲವಾರು ಅಭಿಪ್ರಾಯಗಳನ್ನು ಒಳಗೊಂಡಿದ್ದು, ಆಳವಾದ ಸಂಶೋಧನೆಯ ನಂತರವೇ ಇದನ್ನು ನಿರ್ಮಿಸಲಾಗಿದೆ ಎಂದಿದೆ.

‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಇದೇ ಮಂಗಳವಾರ ಬಿಬಿಸಿ ಬಿಡುಗಡೆ ಮಾಡಿತ್ತು. ಆದರೆ ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಆ ನಂತರ ಬಿಬಿಸಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ 2002 ರ ಗಲಭೆಗಳ ಸಮಯದಲ್ಲಿ ಹಿಂಸಾಚಾರದ ಪ್ರಮಾಣವು “ವರದಿ ಮಾಡಿದ್ದಕ್ಕಿಂತ ಹೆಚ್ಚು” ಎಂದು ಬ್ರಿಟಿಷ್ ತನಿಖಾ ತಂಡವು ತೀರ್ಮಾನಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ. ಫೆಬ್ರವರಿ 27, 2002 ರಂದು ಅಂದಿನ ಗುಜರಾತ್ ಸಿಎಂ ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಮತ್ತು ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದರು ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ಅದು ಉಲ್ಲೇಖಿಸಿದೆ.

ತನಿಖಾ ತಂಡದ ಭಾಗವಾಗಿದ್ದ ಬ್ರಿಟಿಷ್ ಮಾಜಿ ಹಿರಿಯ ರಾಜತಾಂತ್ರಿಕರು, ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ ಎಂದು ಆರೋಪಿಸಿದ್ದಾರೆ. ಆ ಗಲಭೆಗೆ ನರೇಂದ್ರ ಮೋದಿಯವರೆ ಸಂಪೂರ್ಣ ಹೊಣೆ ಎಂದು ಸಾಕ್ಷ್ಯಚಿತ್ರ ತೋರಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...