Homeಮುಖಪುಟಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಆಗಲಿದೆ.

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ತನ್ನ ಸಾಕ್ಷ್ಯಚಿತ್ರವನ್ನು ಉನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಆಳವಾದ ಸಂಶೋಧನೆಯ ನಂತರವೇ ನಿರ್ಮಿಸಲಾಗಿದೆ ಎಂದು ಬಿಬಿಸಿ ಹೇಳಿಕೆ ಎಂದು ವೆರೈಟಿ ಮ್ಯಾಗಜೀನ್ ವರದಿ ಮಾಡಿದೆ.

ಸಾಕ್ಷ್ಯಚಿತ್ರ ನಿರ್ಮಾಣದ ಸಂದರ್ಭದಲ್ಲಿ ಬಿಬಿಸಿ ವಕ್ತಾರರು ಭಾರತದ ಸರ್ಕಾರವು ತನ್ನ ವಾದವನ್ನು ಮುಂದಿಡಲು ಕೇಳಿಕೊಂಡರು. ಆದರೆ ಅದಕ್ಕೆ ಭಾರತ ಸರ್ಕಾರ ನಿರಾಕರಿಸಿತು ಎಂದು ಬಿಬಿಸಿ ಹೇಳಿಕೊಂಡಿದೆ.

ಸಾಕ್ಷ್ಯಚಿತ್ರವು ಮೋದಿಯವರ ಕುರಿತು ಕಳಂಕಿತ ನಿರೂಪಣೆ ತೇಲಿಬಿಡಲು ವಿನ್ಯಾಸಗೊಳಿಸಲಾದ ಪ್ರೊಪೊಗಂಡ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆರೋಪಿಸಿದೆ. “ಈ ಸಾಕ್ಷ್ಯಚಿತ್ರದಲ್ಲಿ ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ಮುಂದುವರಿದ ವಸಾಹತುಶಾಹಿ ಮನಸ್ಥಿತಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ಅದಕ್ಕಾಗಿ ಇದನ್ನು ಈ ನಿರೂಪಣೆಯನ್ನು ಮತ್ತೆ ಮತ್ತೆ ತೇಲಿಬಿಡಲಾಗುತ್ತಿ” ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಸಿ ತನ್ನ ಸಾಕ್ಷ್ಯಚಿತ್ರವನ್ನು ಸಮರ್ಥಿಸಿಕೊಂಡಿದ್ದು ‘ಈ ಸಾಕ್ಷ್ಯಚಿತ್ರವು ಬಿಜೆಪಿ ಪಕ್ಷದ ಸದಸ್ಯರ ಪ್ರತಿಕ್ರಿಯೆಗಳನ್ನು ಒಳಗೊಂಡಂತೆ ಹಲವಾರು ಅಭಿಪ್ರಾಯಗಳನ್ನು ಒಳಗೊಂಡಿದ್ದು, ಆಳವಾದ ಸಂಶೋಧನೆಯ ನಂತರವೇ ಇದನ್ನು ನಿರ್ಮಿಸಲಾಗಿದೆ ಎಂದಿದೆ.

‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಇದೇ ಮಂಗಳವಾರ ಬಿಬಿಸಿ ಬಿಡುಗಡೆ ಮಾಡಿತ್ತು. ಆದರೆ ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಆ ನಂತರ ಬಿಬಿಸಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ 2002 ರ ಗಲಭೆಗಳ ಸಮಯದಲ್ಲಿ ಹಿಂಸಾಚಾರದ ಪ್ರಮಾಣವು “ವರದಿ ಮಾಡಿದ್ದಕ್ಕಿಂತ ಹೆಚ್ಚು” ಎಂದು ಬ್ರಿಟಿಷ್ ತನಿಖಾ ತಂಡವು ತೀರ್ಮಾನಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ. ಫೆಬ್ರವರಿ 27, 2002 ರಂದು ಅಂದಿನ ಗುಜರಾತ್ ಸಿಎಂ ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಮತ್ತು ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದರು ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ಅದು ಉಲ್ಲೇಖಿಸಿದೆ.

ತನಿಖಾ ತಂಡದ ಭಾಗವಾಗಿದ್ದ ಬ್ರಿಟಿಷ್ ಮಾಜಿ ಹಿರಿಯ ರಾಜತಾಂತ್ರಿಕರು, ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ ಎಂದು ಆರೋಪಿಸಿದ್ದಾರೆ. ಆ ಗಲಭೆಗೆ ನರೇಂದ್ರ ಮೋದಿಯವರೆ ಸಂಪೂರ್ಣ ಹೊಣೆ ಎಂದು ಸಾಕ್ಷ್ಯಚಿತ್ರ ತೋರಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...