Homeಮುಖಪುಟಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಆಗಲಿದೆ.

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ತನ್ನ ಸಾಕ್ಷ್ಯಚಿತ್ರವನ್ನು ಉನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಆಳವಾದ ಸಂಶೋಧನೆಯ ನಂತರವೇ ನಿರ್ಮಿಸಲಾಗಿದೆ ಎಂದು ಬಿಬಿಸಿ ಹೇಳಿಕೆ ಎಂದು ವೆರೈಟಿ ಮ್ಯಾಗಜೀನ್ ವರದಿ ಮಾಡಿದೆ.

ಸಾಕ್ಷ್ಯಚಿತ್ರ ನಿರ್ಮಾಣದ ಸಂದರ್ಭದಲ್ಲಿ ಬಿಬಿಸಿ ವಕ್ತಾರರು ಭಾರತದ ಸರ್ಕಾರವು ತನ್ನ ವಾದವನ್ನು ಮುಂದಿಡಲು ಕೇಳಿಕೊಂಡರು. ಆದರೆ ಅದಕ್ಕೆ ಭಾರತ ಸರ್ಕಾರ ನಿರಾಕರಿಸಿತು ಎಂದು ಬಿಬಿಸಿ ಹೇಳಿಕೊಂಡಿದೆ.

ಸಾಕ್ಷ್ಯಚಿತ್ರವು ಮೋದಿಯವರ ಕುರಿತು ಕಳಂಕಿತ ನಿರೂಪಣೆ ತೇಲಿಬಿಡಲು ವಿನ್ಯಾಸಗೊಳಿಸಲಾದ ಪ್ರೊಪೊಗಂಡ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆರೋಪಿಸಿದೆ. “ಈ ಸಾಕ್ಷ್ಯಚಿತ್ರದಲ್ಲಿ ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ಮುಂದುವರಿದ ವಸಾಹತುಶಾಹಿ ಮನಸ್ಥಿತಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ಅದಕ್ಕಾಗಿ ಇದನ್ನು ಈ ನಿರೂಪಣೆಯನ್ನು ಮತ್ತೆ ಮತ್ತೆ ತೇಲಿಬಿಡಲಾಗುತ್ತಿ” ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಸಿ ತನ್ನ ಸಾಕ್ಷ್ಯಚಿತ್ರವನ್ನು ಸಮರ್ಥಿಸಿಕೊಂಡಿದ್ದು ‘ಈ ಸಾಕ್ಷ್ಯಚಿತ್ರವು ಬಿಜೆಪಿ ಪಕ್ಷದ ಸದಸ್ಯರ ಪ್ರತಿಕ್ರಿಯೆಗಳನ್ನು ಒಳಗೊಂಡಂತೆ ಹಲವಾರು ಅಭಿಪ್ರಾಯಗಳನ್ನು ಒಳಗೊಂಡಿದ್ದು, ಆಳವಾದ ಸಂಶೋಧನೆಯ ನಂತರವೇ ಇದನ್ನು ನಿರ್ಮಿಸಲಾಗಿದೆ ಎಂದಿದೆ.

‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಇದೇ ಮಂಗಳವಾರ ಬಿಬಿಸಿ ಬಿಡುಗಡೆ ಮಾಡಿತ್ತು. ಆದರೆ ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಆ ನಂತರ ಬಿಬಿಸಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ 2002 ರ ಗಲಭೆಗಳ ಸಮಯದಲ್ಲಿ ಹಿಂಸಾಚಾರದ ಪ್ರಮಾಣವು “ವರದಿ ಮಾಡಿದ್ದಕ್ಕಿಂತ ಹೆಚ್ಚು” ಎಂದು ಬ್ರಿಟಿಷ್ ತನಿಖಾ ತಂಡವು ತೀರ್ಮಾನಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ. ಫೆಬ್ರವರಿ 27, 2002 ರಂದು ಅಂದಿನ ಗುಜರಾತ್ ಸಿಎಂ ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಮತ್ತು ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದರು ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ಅದು ಉಲ್ಲೇಖಿಸಿದೆ.

ತನಿಖಾ ತಂಡದ ಭಾಗವಾಗಿದ್ದ ಬ್ರಿಟಿಷ್ ಮಾಜಿ ಹಿರಿಯ ರಾಜತಾಂತ್ರಿಕರು, ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ ಎಂದು ಆರೋಪಿಸಿದ್ದಾರೆ. ಆ ಗಲಭೆಗೆ ನರೇಂದ್ರ ಮೋದಿಯವರೆ ಸಂಪೂರ್ಣ ಹೊಣೆ ಎಂದು ಸಾಕ್ಷ್ಯಚಿತ್ರ ತೋರಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...