Homeಕರ್ನಾಟಕ'ಮೋದಿ ಉಪನಾಮ' ಟೀಕೆಗೆ ರಾಹುಲ್ ವಿರುದ್ಧ ಮಾನನಷ್ಟ ಕೇಸ್: ಸೂರತ್‌ ಕೋರ್ಟ್‌ನಿಂದ ಇಂದು ತೀರ್ಪು ಸಾಧ್ಯತೆ

‘ಮೋದಿ ಉಪನಾಮ’ ಟೀಕೆಗೆ ರಾಹುಲ್ ವಿರುದ್ಧ ಮಾನನಷ್ಟ ಕೇಸ್: ಸೂರತ್‌ ಕೋರ್ಟ್‌ನಿಂದ ಇಂದು ತೀರ್ಪು ಸಾಧ್ಯತೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019ರಲ್ಲಿ ಮಾಡಿರುವ ”ಮೋದಿ ಉಪನಾಮ” ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ ನ್ಯಾಯಾಲಯವು ಗುರುವಾರ ತೀರ್ಪು ನೀಡಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಸೂರತ್‌ಗೆ ಭೇಟಿ ನೀಡಲಿದ್ದಾರೆ.

“ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?” ಎಂಬ ಟೀಕೆಗಳ ಮೇಲೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರು ನೀಡಿದ್ದರು. ರಾಹುಲ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯವು ಕಳೆದ ವಾರ ಎರಡೂ ಕಡೆಯ ಅಂತಿಮ ವಾದಗಳನ್ನು ಆಲಿಸಿದೆ ಮತ್ತು ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಯ ತೀರ್ಪುನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್‌ಎಚ್ ವರ್ಮಾ ಅವರು ಮಾರ್ಚ್ 23 ರಂದು ಪ್ರಕಟಿಸುತ್ತಾರೆ ಎಂದು ಗಾಂಧಿ ಪರ ವಕೀಲ ಕಿರಿತ್ ಪನ್ವಾಲಾ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಪ್ರಕರಣದ ಹಿನ್ನೆಲೆ

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

‘ರಾಹುಲ್‌ ಅವರು ಕೋಲಾರದಲ್ಲಿ ನಡೆದಿದ್ದ ರ‍್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ನಿಂದಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...