Homeಮುಖಪುಟರಾಹುಲ್ ವಿರುದ್ಧ ಮಾನಹಾನಿ ಪ್ರಕರಣ: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಪಾಟ್ನಾ ಹೈಕೋರ್ಟ್ ತಡೆ

ರಾಹುಲ್ ವಿರುದ್ಧ ಮಾನಹಾನಿ ಪ್ರಕರಣ: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಪಾಟ್ನಾ ಹೈಕೋರ್ಟ್ ತಡೆ

- Advertisement -
- Advertisement -

ಮೋದಿ ಉಪನಾಮ ಬಳಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣವನ್ನು ಪಾಟ್ನಾ ಹೈಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

2019ರಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು, ‘ಮೋದಿ ಉಪನಾಮ ಇರುವವರೇ ಏಕೆ ಕಳ್ಳರಿದ್ದಾರೆ’ ಎಂಬ ಟೀಕೆಯನ್ನು ಮಾಡಿದ್ದರು. ಭಾರತೀಯ ಜನತಾ ಪಕ್ಷದ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಗುಜರಾತ್‌ನಲ್ಲಿ ಇದೇ ರೀತಿಯ ಪ್ರಕರಣ ದಾಖಲಾಗಿ ಸೂರತ್‌ ನ್ಯಾಯಾಲಯದಿಂದ ಶಿಕ್ಷೆಯೂ ಆಗಿರುವುದರಿಂದ, ಮತ್ತೊಂದು ಪ್ರಕರಣದ ವಿಚಾರಣೆಯನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ತಮ್ಮ ಭಾಷಣದ ವೇಳೆ ರಾಹುಲ್ ಅವರು, ದೇಶದ ಉನ್ನತ ಮಟ್ಟದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಪರಾರಿಯಾದ ಭಾರತೀಯ ಉದ್ಯಮಿಗಳಾದ ನೀರವ್ ಮೋದಿ, ಲಲಿತ್ ಮೋದಿ ಅವರನ್ನು ಉಲ್ಲೇಖಿಸಿದ್ದರು.

ರಾಹುಲ್ ಗಾಂಧಿಯವರು ಸಲ್ಲಿಸಿದ ಅರ್ಜಿಯನ್ನು ಕೈಗೆತ್ತಿಕೊಂಡಿರುವ ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಸಂದೀಪ್ ಕುಮಾರ್ ಅವರು ವಿಚಾರಣಾ ನ್ಯಾಯಾಲದ ವಿಚಾರಣೆಗಳಿಗೆ ತಡೆ ನೀಡಿದ್ದಾರೆ.

ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಗುಜರಾತ್‌ನ ಸೂರತ್‌ ನ್ಯಾಯಾಲಯದಿಂದ ಶಿಕ್ಷೆ ವಿಧಿಸಲಾಗಿದೆ. ಅದೇ ವಿಷಯಕ್ಕಾಗಿ ಮತ್ತೆ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯವರು ತಮ್ಮ ಮನವಿಯಲ್ಲಿ ವಾದಿಸಿದ್ದಾರೆ.

ನ್ಯಾಯಾಧೀಶರು ವಿಚಾರಣೆಯನ್ನು ಮೇ 16ರವರೆಗೆ ತಡೆಹಿಡಿದರು. ಈ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಏಪ್ರಿಲ್ 25ರಂದು ತಮ್ಮ ಮುಂದೆ ಹಾಜರಾಗುವಂತೆ ಪಾಟ್ನಾದ ವಿಚಾರಣಾ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಸೂಚಿಸಿತ್ತು.

ಬಿಜೆಪಿ ನಾಯಕ ಮತ್ತು ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಗುಜರಾತ್‌ನ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಹೀಗಾಗಿ ಲೋಕಸಭೆ ಸದಸ್ಯತ್ವದಿಂದ ರಾಹುಲ್‌ ಅವರನ್ನು ಅನರ್ಹಗೊಳಿಸಲಾಗಿದೆ.

“ಮೋದಿ ಎಂಬ ಉಪನಾಮವನ್ನು ಹೊಂದಿರುವ, ಇಡೀ ಭಾರತದಲ್ಲಿ ವಾಸಿಸುವ 13 ಕೋಟಿ ಜನರನ್ನು ಗಾಂಧಿಯವರು ಅಪಮಾನಗೊಳಿಸಿದ್ದಾರೆ” ಎಂದು ಪೂರ್ಣೇಶ್ ಮೋದಿ ಹೇಳಿದ್ದರು. “ಭ್ರಷ್ಟಾಚಾರವನ್ನು ಎತ್ತಿ ಹಿಡಿಯಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ” ಎಂದು ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ್ದರು.

ತನಗೆ ವಿಧಿಸಲಾಗಿರುವ ಶಿಕ್ಷೆಗೆ ತಡೆ ನೀಡಬೇಕೆಂದು ರಾಹುಲ್ ಗಾಂಧಿಯವರು ಸಲ್ಲಿಸಿದ್ದ ಮನವಿಯನ್ನು ಸೂರತ್ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 20 ರಂದು ತಿರಸ್ಕರಿಸಿತು. “ಸಂಸತ್ತಿನ ಸದಸ್ಯರಾಗಿ ಮತ್ತು ದೇಶದ ಎರಡನೇ ಅತಿದೊಡ್ಡ ರಾಜಕೀಯ ಪಕ್ಷದ ಮಾಜಿ ಅಧ್ಯಕ್ಷರಾಗಿ ನೀವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು” ಎಂದು ನ್ಯಾಯಾಲಯ ಪ್ರತಿಕ್ರಿಯಿಸಿತ್ತು.

ಇದನ್ನೂ ಓದಿರಿ: ಸಲಿಂಗ ವಿವಾಹ ವಿಚಾರ ಸಂಸತ್ತಿಗೆ ಬಿಡುವಂತೆ ಸುಪ್ರೀಂ ಕೋರ್ಟ್‌ಗೆ ಬಾರ್ ಕೌನ್ಸಿಲ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....