Homeಮುಖಪುಟರಾಹುಲ್ ವಿರುದ್ಧ ಮಾನಹಾನಿ ಪ್ರಕರಣ: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಪಾಟ್ನಾ ಹೈಕೋರ್ಟ್ ತಡೆ

ರಾಹುಲ್ ವಿರುದ್ಧ ಮಾನಹಾನಿ ಪ್ರಕರಣ: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಪಾಟ್ನಾ ಹೈಕೋರ್ಟ್ ತಡೆ

- Advertisement -
- Advertisement -

ಮೋದಿ ಉಪನಾಮ ಬಳಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣವನ್ನು ಪಾಟ್ನಾ ಹೈಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

2019ರಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು, ‘ಮೋದಿ ಉಪನಾಮ ಇರುವವರೇ ಏಕೆ ಕಳ್ಳರಿದ್ದಾರೆ’ ಎಂಬ ಟೀಕೆಯನ್ನು ಮಾಡಿದ್ದರು. ಭಾರತೀಯ ಜನತಾ ಪಕ್ಷದ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಗುಜರಾತ್‌ನಲ್ಲಿ ಇದೇ ರೀತಿಯ ಪ್ರಕರಣ ದಾಖಲಾಗಿ ಸೂರತ್‌ ನ್ಯಾಯಾಲಯದಿಂದ ಶಿಕ್ಷೆಯೂ ಆಗಿರುವುದರಿಂದ, ಮತ್ತೊಂದು ಪ್ರಕರಣದ ವಿಚಾರಣೆಯನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ತಮ್ಮ ಭಾಷಣದ ವೇಳೆ ರಾಹುಲ್ ಅವರು, ದೇಶದ ಉನ್ನತ ಮಟ್ಟದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಪರಾರಿಯಾದ ಭಾರತೀಯ ಉದ್ಯಮಿಗಳಾದ ನೀರವ್ ಮೋದಿ, ಲಲಿತ್ ಮೋದಿ ಅವರನ್ನು ಉಲ್ಲೇಖಿಸಿದ್ದರು.

ರಾಹುಲ್ ಗಾಂಧಿಯವರು ಸಲ್ಲಿಸಿದ ಅರ್ಜಿಯನ್ನು ಕೈಗೆತ್ತಿಕೊಂಡಿರುವ ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಸಂದೀಪ್ ಕುಮಾರ್ ಅವರು ವಿಚಾರಣಾ ನ್ಯಾಯಾಲದ ವಿಚಾರಣೆಗಳಿಗೆ ತಡೆ ನೀಡಿದ್ದಾರೆ.

ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಗುಜರಾತ್‌ನ ಸೂರತ್‌ ನ್ಯಾಯಾಲಯದಿಂದ ಶಿಕ್ಷೆ ವಿಧಿಸಲಾಗಿದೆ. ಅದೇ ವಿಷಯಕ್ಕಾಗಿ ಮತ್ತೆ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯವರು ತಮ್ಮ ಮನವಿಯಲ್ಲಿ ವಾದಿಸಿದ್ದಾರೆ.

ನ್ಯಾಯಾಧೀಶರು ವಿಚಾರಣೆಯನ್ನು ಮೇ 16ರವರೆಗೆ ತಡೆಹಿಡಿದರು. ಈ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಏಪ್ರಿಲ್ 25ರಂದು ತಮ್ಮ ಮುಂದೆ ಹಾಜರಾಗುವಂತೆ ಪಾಟ್ನಾದ ವಿಚಾರಣಾ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಸೂಚಿಸಿತ್ತು.

ಬಿಜೆಪಿ ನಾಯಕ ಮತ್ತು ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಗುಜರಾತ್‌ನ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಹೀಗಾಗಿ ಲೋಕಸಭೆ ಸದಸ್ಯತ್ವದಿಂದ ರಾಹುಲ್‌ ಅವರನ್ನು ಅನರ್ಹಗೊಳಿಸಲಾಗಿದೆ.

“ಮೋದಿ ಎಂಬ ಉಪನಾಮವನ್ನು ಹೊಂದಿರುವ, ಇಡೀ ಭಾರತದಲ್ಲಿ ವಾಸಿಸುವ 13 ಕೋಟಿ ಜನರನ್ನು ಗಾಂಧಿಯವರು ಅಪಮಾನಗೊಳಿಸಿದ್ದಾರೆ” ಎಂದು ಪೂರ್ಣೇಶ್ ಮೋದಿ ಹೇಳಿದ್ದರು. “ಭ್ರಷ್ಟಾಚಾರವನ್ನು ಎತ್ತಿ ಹಿಡಿಯಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ” ಎಂದು ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ್ದರು.

ತನಗೆ ವಿಧಿಸಲಾಗಿರುವ ಶಿಕ್ಷೆಗೆ ತಡೆ ನೀಡಬೇಕೆಂದು ರಾಹುಲ್ ಗಾಂಧಿಯವರು ಸಲ್ಲಿಸಿದ್ದ ಮನವಿಯನ್ನು ಸೂರತ್ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 20 ರಂದು ತಿರಸ್ಕರಿಸಿತು. “ಸಂಸತ್ತಿನ ಸದಸ್ಯರಾಗಿ ಮತ್ತು ದೇಶದ ಎರಡನೇ ಅತಿದೊಡ್ಡ ರಾಜಕೀಯ ಪಕ್ಷದ ಮಾಜಿ ಅಧ್ಯಕ್ಷರಾಗಿ ನೀವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು” ಎಂದು ನ್ಯಾಯಾಲಯ ಪ್ರತಿಕ್ರಿಯಿಸಿತ್ತು.

ಇದನ್ನೂ ಓದಿರಿ: ಸಲಿಂಗ ವಿವಾಹ ವಿಚಾರ ಸಂಸತ್ತಿಗೆ ಬಿಡುವಂತೆ ಸುಪ್ರೀಂ ಕೋರ್ಟ್‌ಗೆ ಬಾರ್ ಕೌನ್ಸಿಲ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...