Homeಕರ್ನಾಟಕಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

ಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

- Advertisement -
- Advertisement -

‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆ ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಜಯ್‌ಕುಮಾರ್ ಎಸ್. ಜಾಟ್ಲಾ ವಿಚಾರಣೆ ನಡೆಸಿದರು.

ದೂರುದಾರೆ ರೋಹಿಣಿ ಸಿಂಧೂರಿ ಮತ್ತು ಆರೋಪಿ ರೂಪಾ ಮೌದ್ಗಿಲ್ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರೂಪಾ ಮೌದ್ಗಿಲ್ ಪರ ಹಾಜರಿದ್ದ ವಕೀಲ ಪಿ. ಪ್ರಸನ್ನ ಕುಮಾರ್ ಅವರು ಸಾಕ್ಷಿಯ ಪಾಟೀ ಸವಾಲು ಮಾಡಿದರು.

ವಾದ ಆಲಿಸಿದ ನ್ಯಾಯಾಧೀಶರು, “ನೀವಿಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳು; ನಿಮ್ಮ ಕೆಲಸ ಸಮಾಜಕ್ಕಾಗಿ ಮೀಸಲಿಡಬೇಕು. ಹೀಗೆಲ್ಲಾ ನ್ಯಾಯಾಲಯದ ಕಲಾಪದಲ್ಲಿ ವ್ಯಯಿಸುವ ಬದಲು ರಾಜಿಯಾಗಲು ಸಾಧ್ಯವೇ ಯೋಚಿಸಿ” ಎಂದು ಸಲಹೆ ನೀಡಿದರು. ನಂತರ, “ಒನ್ ಮಿನಿಟ್ ಅಪಾಲಜಿ ಪುಸ್ತಕವನ್ನು ಓದಿ’ ಎಂದು ಸಲಹೆ ನೀಡಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ, ರೋಹಿಣಿ ಪರ ವಕೀಲರು ಗೌಪ್ಯ ವಿಚಾರಣೆಗೆ ಕೋರಿದರು. ಆ ಮನವಿಯನ್ನು ರೂಪಾ ಪರ ವಕೀಲರು ಆಕ್ಷೇಪಿಸಿದರು. ನಂತರ ಇಬ್ಬರ ಒಪ್ಪಿಗೆ ಗೌಪ್ಯ ವಿಚಾರಣೆ ನಡೆಸಲಾಯಿತು. ಅದಕ್ಕಾಗಿ ಕೋರ್ಟ್‌ ಹಾಲ್‌ ಒಳಗಿದ್ದ ವಕೀಲರು, ಕೋರ್ಟ್‌ ಸಿಬ್ಬಂದಿ, ಪೊಲೀಸರು, ಇತರೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಲಾಯಿತು.

ಸಿಂಧೂರಿ ಪತಿ ಸುಧೀರ್‌ ರೆಡ್ಡಿ ಮತ್ತು ರೂಪಾ ಪತಿ ಮನೀಷ್‌ ಮೌದ್ದಿಲ್‌ ಅವರನ್ನು ಸಹ ಹೊರಗೆ ಕಳುಹಿಸಿ ಕೋರ್ಟ್‌ ಬಾಗಿಲು ಮುಚ್ಚಲಾಯಿತು. ರೂಪಾ, ರೋಹಿಣಿ ಮತ್ತು ಅವರಿಬ್ಬರ ಪರ ವಕೀಲರಿಗೆ ಮಾತ್ರ ಕೋರ್ಟ್ ಒಳಗೆ ಇರಲು ಅನುಮತಿಸಿದ ನ್ಯಾಯಾಧೀಶರು, ಪಾಟಿ ಸವಾಲು ಪ್ರಕ್ರಿಯೆ ನಡೆಸಲಾಯಿತು.

ರೂಪಾ ಮೌದ್ಗಿಲ್ 2023 ರ ಫೆಬ್ರವರಿ 18 ಮತ್ತು 19 ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಲಾಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ನನಗೆ ಮಾನಸಿಕ ಯಾತನೆ ಉಂಟು ಮಾಡಿದೆ. ಆದ್ದರಿಂದ ರೂಪಾ ಅವರಿಂದ ರೂ. ಒಂದು ಕೋಟಿ ಹಣವನ್ನು ಪಾವತಿಸಲು ನಿರ್ದೇಶಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ 2023ರ ಮಾರ್ಚ್ 3 ರಂದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ; ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...