Homeಮುಖಪುಟಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

- Advertisement -
- Advertisement -

ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ ಸಕ್ಸೇನಾ ಅವರು ಹೂಡಿರುವ 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯವು ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್ ಜಾರಿಗೊಳಿಸುವ ಪ್ರಕ್ರಿಯೆಗೆ ಎರಡು ವಾರಗಳ ತಡೆ ನೀಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತಿರಸ್ಕರಿಸಿತ್ತು.
ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿತ್ತು.

“ಮುಂದಿನ ದಿನಾಂಕದಂದು, ಅಪರಾಧಿಯು 08/04/2025ರ ಶಿಕ್ಷೆಯ ಆದೇಶದ ನಿಯಮಗಳನ್ನು ಪಾಲಿಸಲು ವಿಫಲವಾದರೆ, ನ್ಯಾಯಾಲಯವು ದಯಾಪರ ಶಿಕ್ಷೆಯನ್ನು ಮರುಪರಿಶೀಲಿಸಬೇಕಾಗುತ್ತದೆ ಮತ್ತು ಶಿಕ್ಷೆಯ ಮೇಲಿನ ಆದೇಶವನ್ನು ಬದಲಾಯಿಸಬೇಕಾಗುತ್ತದೆ” ಎಂದು ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಏಪ್ರಿಲ್ 23ರ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

“ಪ್ರೊಬೇಷನ್ ಬಾಂಡ್ ಜಾರಿ ತಡೆಯುವಂತೆ ಕೋರಿರುವ ಮೇಧಾ ಪಾಟ್ಕರ್ ಅರ್ಜಿಯು ನ್ಯಾಯಾಲಯವನ್ನು ಮೋಸಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಎಎಸ್‌ಜೆ ವಿಶಾಲ್ ಸಿಂಗ್ ಹೇಳಿದ್ದಾರೆ.

ಏಪ್ರಿಲ್ 8ರಂದು, ನ್ಯಾಯಾಧೀಶ ಸಿಂಗ್ ಅವರು ಮೇಧಾ ಪಾಟ್ಕರ್ ಅವರಿಗೆ ಒಂದು ವರ್ಷದ ಪ್ರೊಬೇಶನ್ ಅವಧಿಯನ್ನು ಮಂಜೂರು ಮಾಡಿದ್ದರು, ನರ್ಮದಾ ಬಚಾವೋ ಆಂದೋಲನದ (ಎನ್‌ಬಿಎ) ನಾಯಕಿ ಪಾಟ್ಕರ್ ಅವರು ತಾವು ಮಾಡಿರುವ ಕೆಲಸಕ್ಕಾಗಿ ಪ್ರಶಸ್ತಿಗಳನ್ನು ಪಡೆದಿದ್ದಾರೆ ಮತ್ತು ಅವರು ಮಾಡಿದ ಅಪರಾಧವು ಜೈಲು ಶಿಕ್ಷೆಗೆ ಅರ್ಹವಾದಷ್ಟು ಗಂಭೀರವಲ್ಲ ಎಂದು ಹೇಳಿದ್ದರು.

ಇದಕ್ಕೂ ಮೊದಲು, 2000ರಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪಾಟ್ಕರ್ ಅವರ ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಗುಜರಾತ್‌ನಲ್ಲಿ ಎನ್‌ಜಿಒ ಒಂದರ ಮುಖ್ಯಸ್ಥರಾಗಿದ್ದ ಸಕ್ಸೇನಾ ಅವರನ್ನು ಮೇಧಾ ಪಾಟ್ಕರ್ ‘ಹೇಡಿ’ ಎಂದು ಕರೆದಿದ್ದರು ಮತ್ತು ಹವಾಲಾ ವಹಿವಾಟಿನಲ್ಲಿ ಅವರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದರು.

ಮೇ 24, 2024 ರಂದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪಾಟ್ಕರ್ ಅವರ ಹೇಳಿಕೆಗಳನ್ನು ಮಾನನಷ್ಟಕರವೆಂದು ಪರಿಗಣಿಸಿ ಜುಲೈ 1ರಂದು ಅವರಿಗೆ ಐದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದಾಗ್ಯೂ, ಎಎಸ್‌ಜೆ ಸಿಂಗ್ ಅವರು ಕಳೆದ ವರ್ಷ ಜುಲೈ 29ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ್ದರು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...