Homeಮುಖಪುಟಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

- Advertisement -
- Advertisement -

ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ.

ಅಸ್ಸಾಂ ಪಬ್ಲಿಕ್ ವರ್ಕ್ಸ್ ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್‌ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಗೊಗೊಯ್ ಅವರ ಆತ್ಮಚರಿತ್ರೆ ‘ಜಸ್ಟೀಸ್ ಫಾರ್ ಎ ಜಡ್ಜ್‌’ ಕೃತಿಯನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿದ್ದು, “ಪುಸ್ತಕದಲ್ಲಿ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಷಯಗಳನ್ನು ಹೇಳಲಾಗಿದೆ. 1 ಕೋಟಿ ರೂ. ಪರಿಹಾರ ನೀಡಬೇಕು” ಎಂದು ಅಭಿಜೀತ್‌ ಶರ್ಮಾ ದಾವೆ ಹೂಡಿದ್ದಾರೆ.

ಮಾನಹಾನಿಕರ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಇನ್ನು ಮುಂದೆ ಪ್ರಕಟಿಸದಂತೆ, ವಿತರಿಸದಂತೆ ಅಥವಾ ಮಾರಾಟ ಮಾಡದಂತೆ ರಾಜ್ಯಸಭಾ ಸಂಸದರಾಗಿರುವ ಗೊಗೊಯ್ ಮತ್ತು ಈ ಕೃತಿಯ ಪ್ರಕಾಶಕರಿಗೆ ತಡೆಯಾಜ್ಞೆ ನೀಡಬೇಕು ಎಂದು ಶರ್ಮಾ ಮನವಿ ಮಾಡಿದ್ದಾರೆ. ಈ ಪುಸ್ತಕವನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು.

ಗೊಗೊಯ್ ಅವರು 2018 ಮತ್ತು 2019 ರ ನಡುವೆ ಭಾರತದ 46 ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಒಪ್ಪಂದ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಬಾಬರಿ ಮಸೀದಿ ವಿವಾದದಂತಹ ಹಲವಾರು ಪ್ರಮುಖ ಪ್ರಕರಣಗಳ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಒಬ್ಬರು.

ಗೊಗೊಯ್ ಅವರು ತಮ್ಮ ಕೃತಿಯಲ್ಲಿ “ವೈಯಕ್ತಿಕ ದಾಳಿ” ನಡೆಸುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ಸ್ಥಳೀಯ ರಾಜಕಾರಣಿಗಳಿಂದ ವಿಶೇಷವಾಗಿ ಅಭಿಜೀತ್ ಶರ್ಮಾ ಅವರಿಂದ ಸ್ಥಳೀಯ ಮಟ್ಟದಲ್ಲಿ ಎಸ್‌ಸಿಎನ್‌ಆರ್ (ಎನ್‌ಆರ್‌ಸಿಯ ರಾಜ್ಯ ಸಮನ್ವಯಕಾರ) ಮೇಲೆ ವೈಯಕ್ತಿಕ ದಾಳಿ ಹಾಗೂ ನ್ಯಾಯಾಧೀಶರು, ಮುಖ್ಯವಾಗಿ ನನ್ನ ಮೇಲೆ ಪರೋಕ್ಷ ದಾಳಿಗಳು ನಡೆದಿವೆ. ಹಜೇಲಾ (ಆಗಿನ ಎಸ್‌ಸಿಎನ್‌ಆರ್ ಪ್ರತೀಕ್ ಹಜೇಲಾ) ಅವರನ್ನು ಕಿರುಕುಳ ಮತ್ತು ಉದ್ದೇಶಿತ ತೊಂದರೆಗಳಿಂದ ರಕ್ಷಿಸಲು ನಾವು (ಪೀಠ) ಆದೇಶ ಹೊರಡಿಸಬೇಕು ಎಂಬ ಅಭಿಪ್ರಾಯಕ್ಕೆ ಬಂದಿದ್ದೆವು” ಎಂಬುದಾಗಿ ರಂಜನ್ ಗೊಗೊಯ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

“ಐಎಎಸ್ ಅಧಿಕಾರಿಯಾಗಿರುವ ಹಜೇಲಾ ಅವರಿಗೆ ಭದ್ರತಾ ಬೆದರಿಕೆ ಇದೆ ಎಂದು ಅಥವಾ ಹಜೇಲಾ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡುವಂತೆ ಗೊಗೊಯ್ ಅವರ ಮೇಲೆ ತಾನು ಒತ್ತಡ ಸೃಷ್ಟಿಸಿದ್ದೆ ಎಂಬುದಕ್ಕೆ ಎಲ್ಲಿಯೂ ಉಲ್ಲೇಖ ಇಲ್ಲ. ಗೊಗೊಯ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸುವಾಗ ಎಂದಿಗೂ ಯಾವುದೇ ವೈಯಕ್ತಿಕ ದಾಳಿ ನಡೆಸಿರಲಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

“ಹಜೇಲಾ ಅವರ ತವರು ರಾಜ್ಯ ಮಧ್ಯಪ್ರದೇಶಕ್ಕೆ ಇಂಟರ್ ಕೇಡರ್ ವರ್ಗಾವಣೆಯ ನಿಯೋಜನೆಗೆ 2019ರ ಅಕ್ಟೋಬರ್ 18ರಂದು ಪೀಠ ಆದೇಶ ಹೊರಡಿಸಿತ್ತು. ಹಜೇಲಾ ಮತ್ತು ಇತರೆ ಎನ್‌ಆರ್‌ಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತಹ, ಭ್ರಷ್ಟಾಚಾರ ಆರೋಪಗಳು ಮತ್ತು ಸಿಬಿಐ ತನಿಖೆ ಆದೇಶ ಬೆದರಿಕೆಗಳಂತಹ ಪೂರಕ ಘಟನೆಗಳು ನಡೆದವು. ಜತೆಗೆ ಮಾಧ್ಯಮಗಳಿಗೆ ಸಾಕಷ್ಟು ತಪ್ಪು ಮಾಹಿತಿಗಳನ್ನು ರವಾನಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲಾಯಿತು. ಹೀಗಾಗಿ ಸಂವಿಧಾನದ 142ನೇ ವಿಧಿಯನ್ನು ಬಳಸಿ ಹಜೇಲಾ ಅವರನ್ನು ಅಂತರ್ ಕೇಡರ್ ವರ್ಗಾವಣೆ ಮಾಡುವ ಅಹಸಜ ಆದೇಶವನ್ನು ಹೊರಡಿಸುವಂತೆ ನ್ಯಾಯಪೀಠಕ್ಕೆ ನಾನು ಮನವೊಲಿಸಬೇಕಾಗಿತ್ತು” ಎಂದು ಗೊಗೊಯ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...