Homeಮುಖಪುಟಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

- Advertisement -
- Advertisement -

ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ.

ಅಸ್ಸಾಂ ಪಬ್ಲಿಕ್ ವರ್ಕ್ಸ್ ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್‌ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಗೊಗೊಯ್ ಅವರ ಆತ್ಮಚರಿತ್ರೆ ‘ಜಸ್ಟೀಸ್ ಫಾರ್ ಎ ಜಡ್ಜ್‌’ ಕೃತಿಯನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿದ್ದು, “ಪುಸ್ತಕದಲ್ಲಿ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಷಯಗಳನ್ನು ಹೇಳಲಾಗಿದೆ. 1 ಕೋಟಿ ರೂ. ಪರಿಹಾರ ನೀಡಬೇಕು” ಎಂದು ಅಭಿಜೀತ್‌ ಶರ್ಮಾ ದಾವೆ ಹೂಡಿದ್ದಾರೆ.

ಮಾನಹಾನಿಕರ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಇನ್ನು ಮುಂದೆ ಪ್ರಕಟಿಸದಂತೆ, ವಿತರಿಸದಂತೆ ಅಥವಾ ಮಾರಾಟ ಮಾಡದಂತೆ ರಾಜ್ಯಸಭಾ ಸಂಸದರಾಗಿರುವ ಗೊಗೊಯ್ ಮತ್ತು ಈ ಕೃತಿಯ ಪ್ರಕಾಶಕರಿಗೆ ತಡೆಯಾಜ್ಞೆ ನೀಡಬೇಕು ಎಂದು ಶರ್ಮಾ ಮನವಿ ಮಾಡಿದ್ದಾರೆ. ಈ ಪುಸ್ತಕವನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು.

ಗೊಗೊಯ್ ಅವರು 2018 ಮತ್ತು 2019 ರ ನಡುವೆ ಭಾರತದ 46 ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಒಪ್ಪಂದ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಬಾಬರಿ ಮಸೀದಿ ವಿವಾದದಂತಹ ಹಲವಾರು ಪ್ರಮುಖ ಪ್ರಕರಣಗಳ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಒಬ್ಬರು.

ಗೊಗೊಯ್ ಅವರು ತಮ್ಮ ಕೃತಿಯಲ್ಲಿ “ವೈಯಕ್ತಿಕ ದಾಳಿ” ನಡೆಸುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ಸ್ಥಳೀಯ ರಾಜಕಾರಣಿಗಳಿಂದ ವಿಶೇಷವಾಗಿ ಅಭಿಜೀತ್ ಶರ್ಮಾ ಅವರಿಂದ ಸ್ಥಳೀಯ ಮಟ್ಟದಲ್ಲಿ ಎಸ್‌ಸಿಎನ್‌ಆರ್ (ಎನ್‌ಆರ್‌ಸಿಯ ರಾಜ್ಯ ಸಮನ್ವಯಕಾರ) ಮೇಲೆ ವೈಯಕ್ತಿಕ ದಾಳಿ ಹಾಗೂ ನ್ಯಾಯಾಧೀಶರು, ಮುಖ್ಯವಾಗಿ ನನ್ನ ಮೇಲೆ ಪರೋಕ್ಷ ದಾಳಿಗಳು ನಡೆದಿವೆ. ಹಜೇಲಾ (ಆಗಿನ ಎಸ್‌ಸಿಎನ್‌ಆರ್ ಪ್ರತೀಕ್ ಹಜೇಲಾ) ಅವರನ್ನು ಕಿರುಕುಳ ಮತ್ತು ಉದ್ದೇಶಿತ ತೊಂದರೆಗಳಿಂದ ರಕ್ಷಿಸಲು ನಾವು (ಪೀಠ) ಆದೇಶ ಹೊರಡಿಸಬೇಕು ಎಂಬ ಅಭಿಪ್ರಾಯಕ್ಕೆ ಬಂದಿದ್ದೆವು” ಎಂಬುದಾಗಿ ರಂಜನ್ ಗೊಗೊಯ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

“ಐಎಎಸ್ ಅಧಿಕಾರಿಯಾಗಿರುವ ಹಜೇಲಾ ಅವರಿಗೆ ಭದ್ರತಾ ಬೆದರಿಕೆ ಇದೆ ಎಂದು ಅಥವಾ ಹಜೇಲಾ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡುವಂತೆ ಗೊಗೊಯ್ ಅವರ ಮೇಲೆ ತಾನು ಒತ್ತಡ ಸೃಷ್ಟಿಸಿದ್ದೆ ಎಂಬುದಕ್ಕೆ ಎಲ್ಲಿಯೂ ಉಲ್ಲೇಖ ಇಲ್ಲ. ಗೊಗೊಯ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸುವಾಗ ಎಂದಿಗೂ ಯಾವುದೇ ವೈಯಕ್ತಿಕ ದಾಳಿ ನಡೆಸಿರಲಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

“ಹಜೇಲಾ ಅವರ ತವರು ರಾಜ್ಯ ಮಧ್ಯಪ್ರದೇಶಕ್ಕೆ ಇಂಟರ್ ಕೇಡರ್ ವರ್ಗಾವಣೆಯ ನಿಯೋಜನೆಗೆ 2019ರ ಅಕ್ಟೋಬರ್ 18ರಂದು ಪೀಠ ಆದೇಶ ಹೊರಡಿಸಿತ್ತು. ಹಜೇಲಾ ಮತ್ತು ಇತರೆ ಎನ್‌ಆರ್‌ಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತಹ, ಭ್ರಷ್ಟಾಚಾರ ಆರೋಪಗಳು ಮತ್ತು ಸಿಬಿಐ ತನಿಖೆ ಆದೇಶ ಬೆದರಿಕೆಗಳಂತಹ ಪೂರಕ ಘಟನೆಗಳು ನಡೆದವು. ಜತೆಗೆ ಮಾಧ್ಯಮಗಳಿಗೆ ಸಾಕಷ್ಟು ತಪ್ಪು ಮಾಹಿತಿಗಳನ್ನು ರವಾನಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲಾಯಿತು. ಹೀಗಾಗಿ ಸಂವಿಧಾನದ 142ನೇ ವಿಧಿಯನ್ನು ಬಳಸಿ ಹಜೇಲಾ ಅವರನ್ನು ಅಂತರ್ ಕೇಡರ್ ವರ್ಗಾವಣೆ ಮಾಡುವ ಅಹಸಜ ಆದೇಶವನ್ನು ಹೊರಡಿಸುವಂತೆ ನ್ಯಾಯಪೀಠಕ್ಕೆ ನಾನು ಮನವೊಲಿಸಬೇಕಾಗಿತ್ತು” ಎಂದು ಗೊಗೊಯ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...