Homeಮುಖಪುಟಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

- Advertisement -
- Advertisement -

ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ.

ಅಸ್ಸಾಂ ಪಬ್ಲಿಕ್ ವರ್ಕ್ಸ್ ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್‌ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಗೊಗೊಯ್ ಅವರ ಆತ್ಮಚರಿತ್ರೆ ‘ಜಸ್ಟೀಸ್ ಫಾರ್ ಎ ಜಡ್ಜ್‌’ ಕೃತಿಯನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿದ್ದು, “ಪುಸ್ತಕದಲ್ಲಿ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಷಯಗಳನ್ನು ಹೇಳಲಾಗಿದೆ. 1 ಕೋಟಿ ರೂ. ಪರಿಹಾರ ನೀಡಬೇಕು” ಎಂದು ಅಭಿಜೀತ್‌ ಶರ್ಮಾ ದಾವೆ ಹೂಡಿದ್ದಾರೆ.

ಮಾನಹಾನಿಕರ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಇನ್ನು ಮುಂದೆ ಪ್ರಕಟಿಸದಂತೆ, ವಿತರಿಸದಂತೆ ಅಥವಾ ಮಾರಾಟ ಮಾಡದಂತೆ ರಾಜ್ಯಸಭಾ ಸಂಸದರಾಗಿರುವ ಗೊಗೊಯ್ ಮತ್ತು ಈ ಕೃತಿಯ ಪ್ರಕಾಶಕರಿಗೆ ತಡೆಯಾಜ್ಞೆ ನೀಡಬೇಕು ಎಂದು ಶರ್ಮಾ ಮನವಿ ಮಾಡಿದ್ದಾರೆ. ಈ ಪುಸ್ತಕವನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು.

ಗೊಗೊಯ್ ಅವರು 2018 ಮತ್ತು 2019 ರ ನಡುವೆ ಭಾರತದ 46 ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಒಪ್ಪಂದ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಬಾಬರಿ ಮಸೀದಿ ವಿವಾದದಂತಹ ಹಲವಾರು ಪ್ರಮುಖ ಪ್ರಕರಣಗಳ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಒಬ್ಬರು.

ಗೊಗೊಯ್ ಅವರು ತಮ್ಮ ಕೃತಿಯಲ್ಲಿ “ವೈಯಕ್ತಿಕ ದಾಳಿ” ನಡೆಸುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ಸ್ಥಳೀಯ ರಾಜಕಾರಣಿಗಳಿಂದ ವಿಶೇಷವಾಗಿ ಅಭಿಜೀತ್ ಶರ್ಮಾ ಅವರಿಂದ ಸ್ಥಳೀಯ ಮಟ್ಟದಲ್ಲಿ ಎಸ್‌ಸಿಎನ್‌ಆರ್ (ಎನ್‌ಆರ್‌ಸಿಯ ರಾಜ್ಯ ಸಮನ್ವಯಕಾರ) ಮೇಲೆ ವೈಯಕ್ತಿಕ ದಾಳಿ ಹಾಗೂ ನ್ಯಾಯಾಧೀಶರು, ಮುಖ್ಯವಾಗಿ ನನ್ನ ಮೇಲೆ ಪರೋಕ್ಷ ದಾಳಿಗಳು ನಡೆದಿವೆ. ಹಜೇಲಾ (ಆಗಿನ ಎಸ್‌ಸಿಎನ್‌ಆರ್ ಪ್ರತೀಕ್ ಹಜೇಲಾ) ಅವರನ್ನು ಕಿರುಕುಳ ಮತ್ತು ಉದ್ದೇಶಿತ ತೊಂದರೆಗಳಿಂದ ರಕ್ಷಿಸಲು ನಾವು (ಪೀಠ) ಆದೇಶ ಹೊರಡಿಸಬೇಕು ಎಂಬ ಅಭಿಪ್ರಾಯಕ್ಕೆ ಬಂದಿದ್ದೆವು” ಎಂಬುದಾಗಿ ರಂಜನ್ ಗೊಗೊಯ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

“ಐಎಎಸ್ ಅಧಿಕಾರಿಯಾಗಿರುವ ಹಜೇಲಾ ಅವರಿಗೆ ಭದ್ರತಾ ಬೆದರಿಕೆ ಇದೆ ಎಂದು ಅಥವಾ ಹಜೇಲಾ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡುವಂತೆ ಗೊಗೊಯ್ ಅವರ ಮೇಲೆ ತಾನು ಒತ್ತಡ ಸೃಷ್ಟಿಸಿದ್ದೆ ಎಂಬುದಕ್ಕೆ ಎಲ್ಲಿಯೂ ಉಲ್ಲೇಖ ಇಲ್ಲ. ಗೊಗೊಯ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸುವಾಗ ಎಂದಿಗೂ ಯಾವುದೇ ವೈಯಕ್ತಿಕ ದಾಳಿ ನಡೆಸಿರಲಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

“ಹಜೇಲಾ ಅವರ ತವರು ರಾಜ್ಯ ಮಧ್ಯಪ್ರದೇಶಕ್ಕೆ ಇಂಟರ್ ಕೇಡರ್ ವರ್ಗಾವಣೆಯ ನಿಯೋಜನೆಗೆ 2019ರ ಅಕ್ಟೋಬರ್ 18ರಂದು ಪೀಠ ಆದೇಶ ಹೊರಡಿಸಿತ್ತು. ಹಜೇಲಾ ಮತ್ತು ಇತರೆ ಎನ್‌ಆರ್‌ಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತಹ, ಭ್ರಷ್ಟಾಚಾರ ಆರೋಪಗಳು ಮತ್ತು ಸಿಬಿಐ ತನಿಖೆ ಆದೇಶ ಬೆದರಿಕೆಗಳಂತಹ ಪೂರಕ ಘಟನೆಗಳು ನಡೆದವು. ಜತೆಗೆ ಮಾಧ್ಯಮಗಳಿಗೆ ಸಾಕಷ್ಟು ತಪ್ಪು ಮಾಹಿತಿಗಳನ್ನು ರವಾನಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲಾಯಿತು. ಹೀಗಾಗಿ ಸಂವಿಧಾನದ 142ನೇ ವಿಧಿಯನ್ನು ಬಳಸಿ ಹಜೇಲಾ ಅವರನ್ನು ಅಂತರ್ ಕೇಡರ್ ವರ್ಗಾವಣೆ ಮಾಡುವ ಅಹಸಜ ಆದೇಶವನ್ನು ಹೊರಡಿಸುವಂತೆ ನ್ಯಾಯಪೀಠಕ್ಕೆ ನಾನು ಮನವೊಲಿಸಬೇಕಾಗಿತ್ತು” ಎಂದು ಗೊಗೊಯ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...