Homeಮುಖಪುಟಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

- Advertisement -
- Advertisement -

ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ.

ಅಸ್ಸಾಂ ಪಬ್ಲಿಕ್ ವರ್ಕ್ಸ್ ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್‌ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಗೊಗೊಯ್ ಅವರ ಆತ್ಮಚರಿತ್ರೆ ‘ಜಸ್ಟೀಸ್ ಫಾರ್ ಎ ಜಡ್ಜ್‌’ ಕೃತಿಯನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿದ್ದು, “ಪುಸ್ತಕದಲ್ಲಿ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಷಯಗಳನ್ನು ಹೇಳಲಾಗಿದೆ. 1 ಕೋಟಿ ರೂ. ಪರಿಹಾರ ನೀಡಬೇಕು” ಎಂದು ಅಭಿಜೀತ್‌ ಶರ್ಮಾ ದಾವೆ ಹೂಡಿದ್ದಾರೆ.

ಮಾನಹಾನಿಕರ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಇನ್ನು ಮುಂದೆ ಪ್ರಕಟಿಸದಂತೆ, ವಿತರಿಸದಂತೆ ಅಥವಾ ಮಾರಾಟ ಮಾಡದಂತೆ ರಾಜ್ಯಸಭಾ ಸಂಸದರಾಗಿರುವ ಗೊಗೊಯ್ ಮತ್ತು ಈ ಕೃತಿಯ ಪ್ರಕಾಶಕರಿಗೆ ತಡೆಯಾಜ್ಞೆ ನೀಡಬೇಕು ಎಂದು ಶರ್ಮಾ ಮನವಿ ಮಾಡಿದ್ದಾರೆ. ಈ ಪುಸ್ತಕವನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು.

ಗೊಗೊಯ್ ಅವರು 2018 ಮತ್ತು 2019 ರ ನಡುವೆ ಭಾರತದ 46 ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಒಪ್ಪಂದ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಬಾಬರಿ ಮಸೀದಿ ವಿವಾದದಂತಹ ಹಲವಾರು ಪ್ರಮುಖ ಪ್ರಕರಣಗಳ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಒಬ್ಬರು.

ಗೊಗೊಯ್ ಅವರು ತಮ್ಮ ಕೃತಿಯಲ್ಲಿ “ವೈಯಕ್ತಿಕ ದಾಳಿ” ನಡೆಸುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ಸ್ಥಳೀಯ ರಾಜಕಾರಣಿಗಳಿಂದ ವಿಶೇಷವಾಗಿ ಅಭಿಜೀತ್ ಶರ್ಮಾ ಅವರಿಂದ ಸ್ಥಳೀಯ ಮಟ್ಟದಲ್ಲಿ ಎಸ್‌ಸಿಎನ್‌ಆರ್ (ಎನ್‌ಆರ್‌ಸಿಯ ರಾಜ್ಯ ಸಮನ್ವಯಕಾರ) ಮೇಲೆ ವೈಯಕ್ತಿಕ ದಾಳಿ ಹಾಗೂ ನ್ಯಾಯಾಧೀಶರು, ಮುಖ್ಯವಾಗಿ ನನ್ನ ಮೇಲೆ ಪರೋಕ್ಷ ದಾಳಿಗಳು ನಡೆದಿವೆ. ಹಜೇಲಾ (ಆಗಿನ ಎಸ್‌ಸಿಎನ್‌ಆರ್ ಪ್ರತೀಕ್ ಹಜೇಲಾ) ಅವರನ್ನು ಕಿರುಕುಳ ಮತ್ತು ಉದ್ದೇಶಿತ ತೊಂದರೆಗಳಿಂದ ರಕ್ಷಿಸಲು ನಾವು (ಪೀಠ) ಆದೇಶ ಹೊರಡಿಸಬೇಕು ಎಂಬ ಅಭಿಪ್ರಾಯಕ್ಕೆ ಬಂದಿದ್ದೆವು” ಎಂಬುದಾಗಿ ರಂಜನ್ ಗೊಗೊಯ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

“ಐಎಎಸ್ ಅಧಿಕಾರಿಯಾಗಿರುವ ಹಜೇಲಾ ಅವರಿಗೆ ಭದ್ರತಾ ಬೆದರಿಕೆ ಇದೆ ಎಂದು ಅಥವಾ ಹಜೇಲಾ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡುವಂತೆ ಗೊಗೊಯ್ ಅವರ ಮೇಲೆ ತಾನು ಒತ್ತಡ ಸೃಷ್ಟಿಸಿದ್ದೆ ಎಂಬುದಕ್ಕೆ ಎಲ್ಲಿಯೂ ಉಲ್ಲೇಖ ಇಲ್ಲ. ಗೊಗೊಯ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸುವಾಗ ಎಂದಿಗೂ ಯಾವುದೇ ವೈಯಕ್ತಿಕ ದಾಳಿ ನಡೆಸಿರಲಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

“ಹಜೇಲಾ ಅವರ ತವರು ರಾಜ್ಯ ಮಧ್ಯಪ್ರದೇಶಕ್ಕೆ ಇಂಟರ್ ಕೇಡರ್ ವರ್ಗಾವಣೆಯ ನಿಯೋಜನೆಗೆ 2019ರ ಅಕ್ಟೋಬರ್ 18ರಂದು ಪೀಠ ಆದೇಶ ಹೊರಡಿಸಿತ್ತು. ಹಜೇಲಾ ಮತ್ತು ಇತರೆ ಎನ್‌ಆರ್‌ಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತಹ, ಭ್ರಷ್ಟಾಚಾರ ಆರೋಪಗಳು ಮತ್ತು ಸಿಬಿಐ ತನಿಖೆ ಆದೇಶ ಬೆದರಿಕೆಗಳಂತಹ ಪೂರಕ ಘಟನೆಗಳು ನಡೆದವು. ಜತೆಗೆ ಮಾಧ್ಯಮಗಳಿಗೆ ಸಾಕಷ್ಟು ತಪ್ಪು ಮಾಹಿತಿಗಳನ್ನು ರವಾನಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲಾಯಿತು. ಹೀಗಾಗಿ ಸಂವಿಧಾನದ 142ನೇ ವಿಧಿಯನ್ನು ಬಳಸಿ ಹಜೇಲಾ ಅವರನ್ನು ಅಂತರ್ ಕೇಡರ್ ವರ್ಗಾವಣೆ ಮಾಡುವ ಅಹಸಜ ಆದೇಶವನ್ನು ಹೊರಡಿಸುವಂತೆ ನ್ಯಾಯಪೀಠಕ್ಕೆ ನಾನು ಮನವೊಲಿಸಬೇಕಾಗಿತ್ತು” ಎಂದು ಗೊಗೊಯ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...