Homeಕರ್ನಾಟಕಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

- Advertisement -
- Advertisement -

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕರ್ನಾಟಕದಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡಿದ್ದಾರೆ.

ಮೇ 9ರಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್ ಅವರು ಸಲ್ಲಿಸಿರುವ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಶೇ 40ರಷ್ಟು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಈ ಸಂಬಂಧ ಬಿಜೆಪಿ ಕಾನೂನು ಸಮರಕ್ಕೆ ಇಳಿದಿದೆ.

ಚುನಾಯಿತ ಮಾಜಿ ಮತ್ತು ಹಾಲಿ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಹೇಳಿಕೆಯನ್ನು ದಾಖಲಿಸಲು ಪ್ರಕರಣವನ್ನು ಜುಲೈ 27 ರಂದು ನಿಗದಿಪಡಿಸಿದೆ.

ಮೇ 5, 2023 ರಂದು ಪತ್ರಿಕೆಗಳಿಗೆ ಕಾಂಗ್ರೆಸ್‌ ನೀಡಿದ ಜಾಹೀರಾತಿನ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ. “ಬಿಜೆಪಿ ಸರ್ಕಾರವು ಶೇಕಡಾ 40 ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ, ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆ” ಎಂದು ಜಾಹೀರಾತು ಪ್ರಕಟಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕೂಡ ಚುನಾವಣೆ ಸಂದರ್ಭದಲ್ಲಿ ನೋಟೀಸ್ ಕೂಡ ಜಾರಿ ಮಾಡಿತ್ತು.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿದ್ದ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳನ್ನು ಪ್ರಕಟಿಸಿತ್ತು.

ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಅಭಿಪ್ರಾಯಪಟ್ಟಿತ್ತು.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿತ್ತು.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...